• Latest
Labor Minister's visit to Karwar Complaint accepted against company for not paying minimum wage!

ಕಾರವಾರದಲ್ಲಿ ಕಾರ್ಮಿಕ ಸಚಿವರ ಸಂಚಾರ: ಕನಿಷ್ಟ ವೇತನ ಕೊಡದ ಕಂಪನಿ ವಿರುದ್ಧ ದೂರು ಸ್ವೀಕಾರ!

2 days ago
Prediction for July 23 2025

2025ರ ಜುಲೈ 31ರ ದಿನ ಭವಿಷ್ಯ

11 hours ago
Sirsige District Hospital Vaccine for monkeypox soon!

ಶಿರಸಿಗೆ ಜಿಲ್ಲಾ ಆಸ್ಪತ್ರೆ: ಮಂಗನ ಕಾಯಿಲೆಗೆ ಶೀಘ್ರದಲ್ಲಿಯೇ ಲಸಿಕೆ!

11 hours ago
ADVERTISEMENT
Tata.. Boy Boy The Health Minister who came to Kumta but did not come to the hospital!

ಟಾಟಾ.. ಬಾಯ್ ಬಾಯ್: ಕುಮಟಾಗೆ ಬಂದರೂ ಆಸ್ಪತ್ರೆಗೆ ಬರದ ಆರೋಗ್ಯ ಸಚಿವ!

12 hours ago

ಅಂದರ್ ಬಾಹರ್: ಮುಂಡಗೋಡಿನ 16 ಜನರ ಮೇಲೆ ಕಾನೂನು ಅಸ್ತ್ರ!

12 hours ago
There is no drinking water in this town even during the rainy season!

ಈ ಊರಲ್ಲಿ ಮಳೆಗಾಲದಲ್ಲಿಯೂ ಕುಡಿಯಲು ನೀರಿಲ್ಲ!

12 hours ago
Thursday, July 31, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
https://www.painaik.com/ https://www.painaik.com/ https://www.painaik.com/
ADVERTISEMENT

ಕಾರವಾರದಲ್ಲಿ ಕಾರ್ಮಿಕ ಸಚಿವರ ಸಂಚಾರ: ಕನಿಷ್ಟ ವೇತನ ಕೊಡದ ಕಂಪನಿ ವಿರುದ್ಧ ದೂರು ಸ್ವೀಕಾರ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
Labor Minister's visit to Karwar Complaint accepted against company for not paying minimum wage!
Advertisement is not enabled. Advertisement is not enabled. Advertisement is not enabled.
ADVERTISEMENT

`ಕನಿಷ್ಟ ವೇತನವನ್ನು ನೀಡದೇ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಕಂಪನಿ ವಿರುದ್ಧ ಕಾರ್ಮಿಕರು ಧೈರ್ಯದಿಂದ ದೂರು ಕೊಡಬೇಕು’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕರೆ ನೀಡಿದ್ದಾರೆ. `ಹೊರೆ ಗುತ್ತಿಗೆ ನೌಕರರ ಹಿತಾಸಕ್ತಿ ಕಾಪಾಡಲು ತಾವು ಬದ್ಧ’ ಎಂದವರು ಭರವಸೆ ನೀಡಿದ್ದಾರೆ.

ಮಂಗಳವಾರ ಕಾರವಾರದ ಅಜ್ಜಿ ಓಷಿಯನ್ ಹೋಟೆಲ್ ಸಭಾಂಗಣದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದ ಅವರು ಕಾರ್ಮಿಕ ಯೋಜನೆಗಳ ಬಗ್ಗೆ ಅರಿವು ಮೂಡಿಸಿದರು. ಇದರೊಂದಿಗೆ `ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆ ಒದಗಿಸಲು ಇಂಧನಗಳ ಮೇಲಿನ ಸುಂಕದ ಅಲ್ಪ ಮೊತ್ತವನ್ನು ಕಾರ್ಮಿಕ ಮಂಡಳಿಗೆ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡುವೆ’ ಎಂದು ಘೋಷಿಸಿದರು.

`ಕಾರ್ಮಿಕರ ಮಕ್ಕಳಿಗಾಗಿ 6ರಿಂದ 12 ತರಗತಿಯವರಿಗೆ ಉಚಿತ ಶಿಕ್ಷಣ ನಿಡುವ ಶಾಲೆಗಳನ್ನು ತೆರೆಯಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿಯೂ ಒಂದು ಶಾಳೆ ತೆರೆಯುವ ಬಗ್ಗೆ ಚಿಂತಿಸಲಾಗಿದೆ’ ಎಂದರು. `ಸರ್ಕಾರ ಕನಿಷ್ಠ ವೇತನ ಪಾವತಿಯನ್ನು ಕಡ್ಡಾಯಗೊಳಿಸಿದ್ದು, ಈ ಬಗ್ಗೆ ದೂರುಗಳಿದ್ದಲ್ಲಿ ಲಿಖಿತವಾಗಿ ನೇರವಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಬೇಕು’ ಎಂದು ಕರೆ ನೀಡಿದರು. `ರಾಜ್ಯದಲ್ಲಿನ ಸರ್ಕಾರಿ ಇಲಾಖೆಗಳಲ್ಲಿನ ಹೊರಗುತ್ತಿಗೆ ನೌಕರರ ನೇಮಕಾತಿಗಾಗಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿಗಳನ್ನು ರಚಿಸಲಾಗುತ್ತಿದೆ. ನಿರ್ದಿಷ್ಟ ಅವಧಿಗೆ ಸೇವೆ ಸಲ್ಲಿಸಿದ ನೌಕರರರಿಗೆ ಗ್ಯಾಚ್ಯುಯಿಟಿ ಮತ್ತು ಕಡ್ಡಾಯವಾಗಿ ವಿಮೆ ಮಾಡಿಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದ್ದು, ರಾಜ್ಯದಲ್ಲಿ ಕಾರ್ಮಿಕರ ಅಭಿವೃಧ್ದಿಗೆ ಪೂರಕವಾದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದವರು ವಿವರಿಸಿದರು.

ADVERTISEMENT
ADVERTISEMENT

`ಅಸಂಘಟಿತ ವಲಯದ ಕಾರ್ಮಿಕರು ಆರ್ಥಿಕ ಮತ್ತು ಸಾಮಾಜಿಕವಾಗಿ ದುರ್ಬಲರಾಗಿದ್ದಾರೆ. ಸಂಘಟಿತ ಕಾರ್ಮಿಕರಿಗೆ ದೊರೆಯುವ ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಇವರಿಗೆ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನಗೊಳಿಸಿಸಲಾಗಿದೆ. ಈಗಾಗಲೇ ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗಳಿವೆ. ದೇಶದಲ್ಲೇ ಪ್ರಥಮ ಬಾರಿಗೆ ಇ ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗಾಗಿ ಕಾರ್ಮಿಕರ ವಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ’ ಎಂದರು.

ADVERTISEMENT

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾತನಾಡಿ `ಕಾರ್ಮಿಕ ಇಲಾಖೆ ಈ ಮೊದಲು ಕಟ್ಟಡ ಕಾರ್ಮಿಕರಿಗೆ ಮಾತ್ರ ಎಂಬAತೆ ಇದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಣ್ಣ ಸಣ್ಣ ವೃತ್ತಿಗಳನ್ನು ಮಾಡುತ್ತಿದ್ದ 90 ಕ್ಕೂ ಅಧಿಕ ವರ್ಗದ ಕಾರ್ಮಿಕರಿಗೆ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಸಾಮಾನ್ಯರು, ಬಡವರು ಮತ್ತು ಕಾರ್ಮಿಕರ ಪರವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಜನಪರ ಯೋಜನೆಗಳಿಗಾಗಿ ರಾಜ್ಯದಲ್ಲಿ ಹಣಕಾಸಿನ ಯಾವುದೇ ಕೊರತೆ ಇಲ್ಲ’ ಎಂದರು. ಶಾಸಕ ಸತೀಶ್ ಸೈಲ್ ಮಾತನಾಡಿ ಕಾರವಾರದಲ್ಲಿ ಕೈಗಾ, ಸೀಬರ್ಡ್ ಸೇರಿದಂತೆ 10,000 ಕ್ಕೂ ಅಧಿಕ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಗೆ ಪ್ರತ್ಯೇಕ ಇ.ಎಸ್.ಐ ಆಸ್ಪತ್ರೆ ಮಂಜೂರು ಮಾಡುವಂತೆ ಮನವಿ ಮಾಡಿದರು.

ಕೇರಳದ ಮಂಜೇಶ್ವರ ಶಾಸಕ ಅಶ್ರಫ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ರಾಣೆ, ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವೈ ಹಳೇಮನಿ, ಅಸಂಘಟಿತ ಕಾರ್ಮಿಕ ಮಂಡಳಿಯ ಸಹಾಯಕ ಕಾರ್ಮಿಕ ಆಯುಕ್ತೆ ಮೀನಾ ಪಾಟೀಲ್, ಬೆಳಗಾವಿ ವಿಭಾಗದ ಉಪ ಕಾರ್ಮಿಕ ಆಯುಕ್ತ ನಾಗೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ಕೊಳಚೆ ಗುಂಡಿಗೆ ಬಿದ್ದ ಮೂರು ವರ್ಷದ ಮಗು: ಸಾವು

Next Post

ಅಮಾಯಕ ಶಿಕ್ಷಕಿಗೆ ಘನಘೋರ ಶಿಕ್ಷೆ: ಬೈಕಿನಿಂದ ಬಿದ್ದ ಸವೀತಾ ಟೀಚರ್ ಇನ್ನಿಲ್ಲ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋