• Latest
ASHA workers demand salary hike Protest!

ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳದ ಆಸೆ: ಪ್ರತಿಭಟನೆ!

13 hours ago
Prediction for July 23 2025

2025ರ ಆಗಸ್ಟ್ 13ರ ದಿನ ಭವಿಷ್ಯ

12 hours ago
Drug addiction coming to Bhatkal Police stopped it halfway!

ಭಟ್ಕಳಕ್ಕೆ ಬರುತ್ತಿದ್ದ ಮಾದಕ ವ್ಯಸನ: ಅರ್ದದಲ್ಲಿಯೇ ತಡೆದ ಪೊಲೀಸರು!

12 hours ago
ADVERTISEMENT
Sirsi Municipal Council War of words between members!

ಶಿರಸಿ ನಗರಸಭೆ: ಸದಸ್ಯರ ನಡುವೆ ಮಾತಿನ ಯುದ್ಧ!

13 hours ago
Navy worker missing He went fishing and disappeared!

ನೌಕಾನೆಲೆ ಕಾರ್ಮಿಕ ಕಾಣೆ: ಮೀನು ಹಿಡಯಲು ಹೋದವ ಮಾಯವಾದ!

13 hours ago

ಗಂಡ-ಹೆoಡತಿ ಜಗಳ | LIC ಎಜೆಂಟನ ಮನೆಯಲ್ಲಿ ಸಾವು: ಮನೆ ಮಾಲಕನಿಗೆ ತಲೆನೋವು!

13 hours ago
Wednesday, August 13, 2025
mobiletime.in
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
mobiletime.in
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳದ ಆಸೆ: ಪ್ರತಿಭಟನೆ!

mobiletime.inby mobiletime.in
in ನಮ್ಮೂರು - ನಮ್ಮ ಜಿಲ್ಲೆ
ASHA workers demand salary hike Protest!

ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ 500ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಕಾರವಾರದಲ್ಲಿ ಪ್ರತಿಭಟನೆ ನಡೆಸಿದರು. ತಮ್ಮ ಸಮಸ್ಯೆಗಳನ್ನು ಹೇಳಿಕೊಂಡ ಪ್ರತಿಭಟನಾಕಾರರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಏಪ್ರಿಲ್‌ನಿಂದ ಜಾರಿಗೆ ಬರುವಂತೆ ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ 10,000 ರೂ ಗೌರವಧನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. `ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜನವರಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಸಿಎಂ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಪರಿಶೀಲಿಸಿ ಭರವಸೆ ನೀಡಿದ್ದರು. ಏಪ್ರಿಲ್ 2025ರಿಂದ ಮಾಸಿಕ ಕನಿಷ್ಠ 10 ಸಾವಿರ ಗೌರವಧನ ನೀಡುವ ಅವರ ಮಾತು ಈಡೇರಿಲ್ಲ’ ಎಂದು ಅಸಮಧಾನವ್ಯಕ್ತಪಡಿಸಿದರು.

ADVERTISEMENT

`ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ 1000ರೂ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇದು ಇನ್ನೂ ಜಾರಿಯಾಗಿಲ್ಲ’ ಎಂದು ದೂರಿದರು. `ಆಶಾ ಕಾರ್ಯಕರ್ತೆಯರು ಗ್ರಾಮೀಣ ಹಾಗೂ ನಗರ ಕೊಳಚೆ ಪ್ರದೇಶಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಕೆಲಸಕ್ಕೆ ತಕ್ಕ ವೇತನ ಸಿಗುತ್ತಿಲ್ಲ’ ಎಂದು ವಿವರಿಸಿದರು.

`ಕೊರೊನಾ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರಿಗೆ ಸರಕಾರದಿಂದ ನಿಗದಿತ ಪ್ರೋತ್ಸಾಹಧನ ಸಿಗದ ಪರಿಣಾಮ ಅವರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರು ದುಡಿದ ಹಣ ಸೂಕ್ತ ರೀತಿಯಲ್ಲಿ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಪ್ರತಿ ಕಾರ್ಯಕರ್ತೆಗೆ 5,000ರೂ ಮತ್ತು ಕೇಂದ್ರದಿAದ ರೂ.2,000 ನೀಡುವ ಪ್ರೋತ್ಸಾಹಧನ ಬರುತ್ತಿದೆ. ಆದರೆ ಕಳೆದ ಬಜೆಟ್‌ನಲ್ಲಿ 1,000ರೂ ಹೆಚ್ಚಳ ಘೋಷಣೆಯಾಗಿದ್ದರೂ, ಅದು ಕೆಲವೇ ಸದಸ್ಯರಿಗೆ ಮಾತ್ರ ಅನ್ವಯವಾಗಿದೆ. ಹೆರಿಗೆ, ಗರ್ಭಿಣಿಯರ ಆರೈಕೆ, ಲಸಿಕೆ ಸೇವೆಗಳಿಗೂ ಪ್ರೋತ್ಸಾಹಧನ ಸಿಗುತ್ತಿಲ್ಲ’ ಎಂದು ಸಮಸ್ಯೆಗಳ ಬಗ್ಗೆ ಹೇಳಿದರು.

ADVERTISEMENT

`ಕೆಲಸದ ಮೌಲ್ಯಮಾಪನದ ಹೆಸರಿನಲ್ಲಿ ಆಶಾಗಳ ಜನಸಂಖ್ಯೆ ಮಿತಿಯನ್ನು ಹೆಚ್ಚಿಸುವ ಅವೈಜ್ಞಾನಿಕ ನಿರ್ಧಾರವನ್ನು ಕೈಬಿಡಬೇಕು. ಸುಮಾರು 2000 ಆಶಾ ಸುಗಮಕಾರರನ್ನು ಯಾವುದೇ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕಿರುವ ಆದೇಶವನ್ನು ಹಿಂಪಡೆಯಬೇಕು. ನಿವೃತ್ತಿ ಹೊಂದಿದ 60 ವರ್ಷ ಮೇಲ್ಪಟ್ಟ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ನೀಡಬೇಕು. ನಗರ ಪ್ರದೇಶಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ 2000 ಹೆಚ್ಚುವರಿ ಗೌರವಧನ ನೀಡಬೇಕು’ ಎಂದು ಆಗ್ರಹಿಸಿ ಧರಣಿಯನ್ನು ಮುಂದುವರೆಸಿದರು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ, ಪದ್ಮಾ ಚಲವಾದಿ, ಶ್ವೇತಾ ಕಪಡ್ಲಿಕರ್, ನಿವೇದಿತಾ ಕೊಳಂಬಕರ್, ಮಹಾಲಕ್ಷ್ಮಿ ನಾಯ್ಕ, ಪ್ರಭಾಮಣಿ, ಶಾರದಾ ಗೌಡ, ರೇಣುಕಾ ಭಂಡಾರಿ, ಭಾರತಿ ಭಟ್ಟ ಪ್ರತಿಭಟನೆಯ ಮುಂದಾಳತ್ವವಹಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X
ADVERTISEMENT

Discussion about this post

Previous Post

ನೌಕಾನೆಲೆ ಕಾರ್ಮಿಕ ಕಾಣೆ: ಮೀನು ಹಿಡಯಲು ಹೋದವ ಮಾಯವಾದ!

Next Post

ಶಿರಸಿ ನಗರಸಭೆ: ಸದಸ್ಯರ ನಡುವೆ ಮಾತಿನ ಯುದ್ಧ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

error: Content is protected !!
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of Mobile Media Network

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋