ಕುಮಟಾದ ಹೊಲನಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಮದ್ಗುಣಿ ಸರ್ಕಾರಿ ಅಂಗನವಾಡಿಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಕಲಿಕಾ ಸಾಮಗ್ರಿ ವಿತರಿಸಿದ್ದಾರೆ.
ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಜನ ಸಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಅಂಗನವಾಡಿಗೆ ಭೇಟಿ ನೀಡಿದರು. ಈ ವೇಳೆ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಹಾಗೂ ಸುಧಾಕರ್ ನಾಯ್ಕ ಮಕ್ಕಳಿಗೆ ಅಗತ್ಯ ಸಾಮಗ್ರಿ ವಿತರಿಸಿದರು. `ಈಚೆಗೆ ಮಕ್ಕಳು ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ. ಮುಂದಿನ ವರ್ಷದಿಂದ ಸರ್ಕಾರವೇ ಎಲ್ಕೆಜಿ ಹಾಗೂ ಯುಕೆಜಿ ಹಂತದಲ್ಲಿ ಆಂಗ್ಲ ಶಿಕ್ಷಣ ನೀಡುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಬೇಕು’ ಎಂದು ಮನವಿ ಮಾಡಿದರು.
`ಸರಕಾರದ ಸರಕಾರಿ ಶಾಲೆಗಳು ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದ್ದು, ಅದನ್ನು ಉಳಿಸಿ ಬೆಳೆಸುವ ಹೊಣೆ ನಮ್ಮೆಲ್ಲರ ಮೇಲಿದೆ’ ಎಂದರು. ಈ ಸಂದರ್ಭದಲ್ಲಿ ಶಿಕ್ಷಕಿ ಶಶಿಕಲಾ ಪಟಗಾರ ಹಾಗೂ ಸಹಾಯಕಿ ತೇಜಾ ಪಟಗಾರ ಇದ್ದರು.