ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!
January 3, 2026
ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!
January 3, 2026
ರಂಜಿತಾ ಕೊಂದ ರಫೀಕ್ ಇನ್ನಿಲ್ಲ!
January 4, 2026
ಮಕ್ಕಳ ದಿನಾಚರಣೆ ಅಂಗವಾಗಿ ನವೆಂಬರ್ 14ರಂದು ಎಲ್ಲಾ ಶಾಲೆ-ಕಾಲೇಜುಗಳಲ್ಲಿಯೂ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮಕ್ಕಳ ಮಹಾಸಭೆ ಆಯೋಜಿಸಿದೆ. ಜಿಲ್ಲೆಯಲ್ಲಿ 1,04,222 ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಏಕಕಾಲಕ್ಕೆ ಈ ಸಭೆ ನಡೆಸಲಾಗುತ್ತದೆ. ಶಿಕ್ಷಕರ ಜೊತೆ ಪೋಷಕರು ಈ ಸಭೆಯಲ್ಲಿ ಭಾಗವಹಿಸಬೇಕಿದ್ದು, ಎಲ್ಲರಿಗೂ ಮನವರಿಕೆ ಮಾಡಿ ಸಭೆಗೆ ಆಮಂತ್ರಿಸುವAತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ನಿರ್ದೇಶನ ನೀಡಿದ್ದಾರೆ. ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಸರ್ಕಾರದಿಂದ ಅನುಷ್ಠ್ಠಾನಿಸಲಾಗಿರುವ ಉಪಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಸಭೆಯಲ್ಲಿ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯ ಓದು ಹಾಗೂ ಸಭೆಯ ಉದ್ದೇಶಗಳ ಮಂಡನೆ, ಮಕ್ಕಳ ಕಲಿಕಾ ಪ್ರಗತಿ, ಹಾಜರಾತಿ ಮಾಹಿತಿ ಹಂಚಿಕೆ, ಪ್ರಗತಿ ಪತ್ರ ವಿತರಣೆ, ಶಾಲೆ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಸಾಧಕ ವಿದ್ಯಾರ್ಥಿಗಳಿಗೆ ಅಂಭಿನAದನೆ, ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ನಿಷೇಧ ಜಾಗೃತಿ ಮೂಡಿಸಲಾಗುತ್ತದೆ.
ಈ ಮಹಾಸಭೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ 1089 ಪ್ರಾಥಮಿಕ ಶಾಲಾ ವಿಭಾಗದ 41,224 ಮತ್ತು 76 ಪ್ರೌಢಶಾಲೆಗಳ 7259 ವಿದ್ಯಾರ್ಥಿಗಳು ಮತ್ತು ಕಾರವಾರ ಶೈಕ್ಷಣಿಕ ಜಿಲ್ಲೆಯ 913 ಪ್ರಾಥಮಿಕ ಶಾಲಾ ವಿಭಾಗದ 36,689 ಮತ್ತು 49 ಪ್ರೌಢಶಾಲೆಗಳ 6562 ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ಪದವಿ ಪೂರ್ವ ವಿಭಾಗದ 37 ಕಾಲೇಜುಗಳ 12,488 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

This will close in 6 seconds
You cannot copy content of this page