ಪರಸ್ಪರ ಪ್ರೀತಿಸಿ ಮದುವೆ ಆದ ಅನೇಕ ದಂಪತಿ ಸಣ್ಣಪುಟ್ಟ ಕಾರಣಗಳಿಗೂ ಮುನಿಸಿಕೊಂಡು ವಿವಾಹ ವಿಚ್ಚೇದನಕ್ಕಾಗಿ ಅರ್ಜಿ ಹಾಕುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ವಿವಾಹ ವಿಚ್ಚೇದನ ಪ್ರಕರಣ ಹೆಚ್ಚಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಅತಿಯಾದ ನಿರೀಕ್ಷೆ, ದಾಂಪತ್ಯದಲ್ಲಿನ ಕಲಹ, ಮಕ್ಕಳಾಗದಿರುವ ಕೊರಗು ಹಾಗೂ ಅಕ್ರಮ ಸಂಬoಧದ ಕಾರಣದಿಂದ ಅನೇಕರ ದಾಂಪತ್ಯದಲ್ಲಿ ಬಿರುಕು ಮೂಡುತ್ತಿದೆ. ಅದು ವಿವಾಹ ವಿಚ್ಚೇದನ ಕೋರಿ ಕೋರ್ಟಿನ ಮೆಟ್ಟಿಲೇರುತ್ತಿದ್ದು, ಅನೇಕ ಸನ್ನಿವೇಶಗಳಲ್ಲಿ ನ್ಯಾಯಾಧೀಶರೇ ದಂಪತಿಯನ್ನು ಒಂದು ಮಾಡುತ್ತಿದ್ದಾರೆ. ಆಪ್ತ ಸಮಾಲೋಚನೆ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನದ ನಡುವೆಯೂ ಅಂಕೋಲಾದಲ್ಲಿ ವಿಚ್ಚೇದಿತರ ಸಂಖ್ಯೆ ಅಧಿಕವಾಗುತ್ತಿದೆ.
ಮದುವೆಯ ಸಂಭ್ರಮಕ್ಕಾಗಿ ಕೈಗೆ ಹಚ್ಚಿದ ಮೆಹೆಂದಿಯ ಬಣ್ಣ ಮಾಸುವ ಮುನ್ನವೆ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ ಪ್ರಕರಣಗಳು ವರದಿಯಾಗುತ್ತಿದೆ. ಇಂಥ ಪ್ರಕರಣ ತೀವ್ರವಾಗಿ ಹೆಚ್ಚುತ್ತಿರುವ ವಿದ್ಯಮಾನ ಕಳವಳ ಹೆಚ್ಚಿಸಿದೆ. ಸುಂದರ ಕನಸುಗಳನ್ನು ಹೊತ್ತು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗಳು ಯಾವುದೇ ಸಕಾರಣವಿಲ್ಲದೇ ಕೌಟುಂಬಿಕ ನ್ಯಾಯಾಲಯದಲ್ಲಿ `ನಮ್ಮ ದಾಂಪತ್ಯಕ್ಕೆ ಕಾನೂನಾತ್ಮಕವಾಗಿ ಮುಕ್ತಿ ಕೊಡಿ’ ಎಂದು ಮನವಿ ಮಾಡುತ್ತಿದ್ದಾರೆ. ಇದನ್ನು ನ್ಯಾಯ ನೀಡಬೇಕಾದ ಸ್ಥಾನದಲ್ಲಿರುವವರೇ ಆಘಾತಕ್ಕೆ ಒಳಗಾಗಿದ್ದಾರೆ.
ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರತಿ ವರ್ಷ ನೂರಾರು ವಿವಾಹ ವಿಚ್ಚೇಧನ ಅರ್ಜಿಗಳು ದಾಖಲಾಗುತ್ತಿವೆ. ವಿಚಾರಣೆ ವೇಳೆ ದುರ್ಬಲಗೊಳ್ಳುತ್ತಿರುವ ಮದುವೆ ವ್ಯವಸ್ಥೆ, ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿ. ಆರ್ಥಿಕ ಭದ್ರತೆ, ವೇಗದ ಆಧುನಿಕ ಜೀವನ ಶೈಲಿ. ಕಾನೂನಿನ ದುರ್ಬಳಕೆ, ಸಾಮಾಜಿಕ ಜಾಲತಾಣಗಳ ಹಾವಳಿ, ಅನೈತಿಕ ಸಂಬoಧಗಳ ಕಾರಣಗಳು ಹೊರ ಬಿದ್ದಿವೆ. ಪತಿ ಮಾಜಿ ಪ್ರೀಯತಮೆಯ ಜೊತೆ ಸಂಬAಧ, ಗಂಡ ದುಡಿದಿದ್ದು ಎಲ್ಲ ತನ್ನದಾಗಬೇಕು ಎಂಬ ಮನಸ್ಥಿತಿ, ಗಂಡನ ಮನೆಯವರಿಂದ ಬೇರ್ಪಟ್ಟು ಬೇರೆ ಮನೆ ಮಾಡಿಕೊಂಡು ಗಂಡನೊAದಿಗೆ ಸ್ವತಂತ್ರವಾಗಿರಬೇಕು ಎಂಬ ಬಯಕೆಗೆ ಒಪ್ಪದ ಪತಿ. ನಿತ್ಯ ಇಬ್ಬರ ನಡುವೆ ಮನಸ್ತಾಪ, ಜಗಳ, ಅಂತಿಮವಾಗಿ ಹೊಂದಾಣಿಕೆ ಆಗುತ್ತಿಲ್ಲ ಎಂಬ ಕಾರಣ ನೀಡಿ ವಿವಾಹ ವಿಚ್ಛೇದನಕ್ಕಾಗಿ ನ್ಯಾಯಾಲಯದ ಬಾಗಿಲು ತಟ್ಟುತ್ತಿರುವ ಪ್ರಕರಣ ಹೆಚ್ಚಾಗಿದೆ.
ಅನೈತಿಕ ಸಂಬoಧ, ತೀರದ ಹಣದ ದಾಹ, ಮದುವೆಯಾಗಿ ಕೆಲ ತಿಂಗಳು ಮಾತ್ರ ಜೀವನ, ಕಾನೂನು ದುರುಪಯೋಗ ಪಡಿಸಿಕೊಂಡು ಪತಿಯ ವಿರುದ್ಧ ಪ್ರಕರಣ ದಾಖಲು, ನಂತರ ವಿವಾಹ ವಿಚ್ಚೇದನ, ಜೀವನಾಂಶ ಬೇಡಿಕೆ, ಮರುಮದುವೆ ಪುನಃ ಅದೇ ರೀತಿಯ ಮನಸ್ಥಿತಿ, ವಿವಾಹ ವಿಚ್ಚೇದನ, ಮತ್ತೆ ಜೀವನಾಂಶಕ್ಕೆ ಬೇಡಿಕೆ ಹೀಗೆ ಸಕಾರಣವಿಲ್ಲದೇ ಪ್ರಕರಣ ದಾಖಲಾಗುತ್ತಿರುವುದು ಸಹ ಗಮನಕ್ಕೆ ಬಂದಿದೆ. ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸುವವರಿಗೆ ಮಕ್ಕಳಿದ್ದರೆ ಅವರ ಭವಿಷ್ಯದ ಬಗ್ಗೆ ಕೂಡ ಚಿಂತನೆ ಮಾಡುವಂಥ ಮನಸ್ಥಿತಿ ಇಲ್ಲದಿರುವವರೂ ಸಹ ಇದ್ದಾರೆ. ಸೇಡು, ಸ್ವತಂತ್ರದ ಬದುಕಿಗಾಗಿ ಹಾತೊರೆದು ವಿವಾಹ ಬಂಧನದ ಮುಕ್ತಿಗೆ ಹಾತೊರೆಯುವಂತಾಗಿದೆ
ವಿವಾಹ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸುವವರು ಬಹುತೇಕ ಸುಶಿಕ್ಷಿತರೇ ಹೆಚ್ಚಾಗಿದ್ದಾರೆ. ಇದಕ್ಕೆ ಅವರಲ್ಲಿರುವ ಸ್ವಚ್ಛಂದ ಹಾಗೂ ಆಧುನಿಕ ಸ್ವತಂತ್ರ ಜೀವನದ ಮನೋಭಾವ ಕಾರಣ. ಜೊತೆಗೆ ಒಬ್ಬರಿಗೊಬ್ಬರಲ್ಲಿನ ಆರ್ಥಿಕ ಭದ್ರತೆ ಹಾಗೂ ಕಾನೂನಿನ ದುರ್ಬಳಕೆ. ಇವುಗಳಿಂದಾಗಿ ವಿಚ್ಚೇದನಕ್ಕೆ ನ್ಯಾಯಾಲಯಕ್ಕೆ ಎಡತಾಕುವಂತಾಗಿದೆ. ವಿಚ್ಚೇದನಕ್ಕಾಗಿ ಪತ್ನಿ ಪ್ರಕರಣ ದಾಖಲಿಸಿದರೆ ಪತಿ ಏಳೆಂಟು ವರ್ಷಗಳಿಂದ ನಾಪತ್ತೆಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ಇರುವ ಪ್ರಕರಣಗಳು ಸಹ ಇವೆ. ಸ್ಥಳೀಯ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನಕ್ಕೆ ಅರ್ಜಿ ದಾಖಲಿಸಿದಲ್ಲಿ ಮಜುಗರ ಎದುರಿಸಬೇಕಾದೀತು ಎಂಬ ಆತಂಕದಿAದ ಬೇರೆ ಬೇರೆ ತಾಲೂಕಿನ ಕೌಟುಂಬಿಕ ನ್ಯಾಯಾಲಯದಲ್ಲಿಯೂ ಕೆಲವರು ಪ್ರಕರಣ ದಾಖಲಿಸಿರುವುದು ಬೆಳಕಿಗೆ ಬಂದಿದೆ.