ಉತ್ತರ ಕನ್ನಡ ಜಿಲ್ಲೆಯ ಆರು ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ರಾಜ್ಯಪತ್ರ ಪ್ರಕಟಿಸಿದೆ. ಶಿರಸಿ ಹಾಗೂ ಕಾರವಾರ ನಗರಸಭೆಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಆಡಳಿತಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಇದರೊಂದಿಗೆ ಅಂಕೋಲಾ ಪುರಸಭೆಗೆ ಕುಮಟಾ ಉಪವಿಭಾಗಾಧಿಕಾರಿಗಳನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಿಸಿದೆ. ಕುಮಟಾ ಪುರಸಭೆಗೆ ಸಹ ಕುಮಟಾದ ಉಪವಿಭಾಗಾಧಿಕಾರಿಗಳು ಆಡಳಿತಾಧಿಕಾರಿಗಳಾಗಿರಲಿದ್ದಾರೆ. ಭಟ್ಕಳ ಪುರಸಭೆಗೆ ಭಟ್ಕಳ ಉಪವಿಭಾಗಾಧಿಕಾರಿ ಹಾಗೂ ಹಳಿಯಾಳ ಪುರಸಭೆಗೆ ಕಾರವಾರ ಉಪವಿಭಾಗಾಧಿಕಾರಿಗಳನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಈ ಸ್ಥಳೀಯ ಸಂಸ್ಥೆಗಳಲ್ಲಿದ್ದ ಜನಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯದ ಹಿನ್ನಲೆ ಸಕಾರ ವಿಶೇಷ ರಾಜ್ಯ ಪತ್ರ ಪ್ರಕಟಿಸಿದೆ. ಅದರಲ್ಲಿ ಆಡಳಿತ ಹಿತದೃಷ್ಠಿ ಹಾಗೂ ಕಚೇರಿಯ ದಿನನಿತ್ಯದ ಕಾರ್ಯ ನಿರ್ವಹಣೆಗಾಗಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿರುವ ಬಗ್ಗೆ ಉಲ್ಲೇಖಿಸಿದೆ.