ಕಾರವಾರದ ರವೀಂದ್ರನಾಥ ಕಡಲತೀರದಲ್ಲಿನ ಮಯೂರವರ್ಮ ವೇದಿಕೆಯಲ್ಲಿ 8 ವರ್ಷದ ನಂತರ `ಕರಾವಳಿ ಉತ್ಸವ’ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 22ರಿಂದ 28ರವರೆಗೆ ನಡೆಯುವ ಉತ್ಸವದ ಕರೆಯೋಲೆಯನ್ನು ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಬಿಡುಗಡೆ ಮಾಡಿದ್ದಾರೆ.
Advertisement. Scroll to continue reading.
`ಕರಾವಳಿ ಉತ್ಸವವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ಸಚಿವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಕಲಾವಿದರು ಪ್ರದರ್ಶನ ನೀಡಲಿದ್ದಾರೆ’ ಎಂದು ಮಂಕಾಳು ವೈದ್ಯ ಅವರು ಹೇಳಿದ್ದಾರೆ. `ಕಾರ್ಯಕ್ರಮ ಆಯೋಜನೆಗೆ ಸರ್ಕಾರದಿಂದ 5 ಕೋಟಿ ರೂ ಹಣ ಬಿಡುಗಡೆಯಾಗಿದ್ದು, ಕಾರ್ಯಕ್ರಮಕ್ಕೆ 10 ಕೋಟಿ ರೂ ವೆಚ್ಚದ ಬಗ್ಗೆ ಅಂದಾಜಿಸಲಾಗಿದೆ’ ಎಂದವರು ತಿಳಿಸಿದ್ದಾರೆ.
`ಕಳೆದ ಒಂದು ತಿಂಗಳಿನಿAದ ಉತ್ಸವದ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮದ ಯಶಸ್ವಿಗೆ ಮಾಧ್ಯಮದವರು ಸೇರಿದಂತೆ ಜಿಲ್ಲೆಯ ಸಂಘ ಸಂಸ್ಥೆಗಳು ತಮ್ಮ ಸಹಕಾರ ನೀಡಬೇಕು’ ಎಂದವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ ನ್ಯಾಯ್ಕ, ತಹಶೀಲ್ದಾರ ಶ್ರೀಕೃಷ್ಣ ಕಾಮಕರ್ ಇದ್ದರು.