ಯಲ್ಲಾಪುರ-ಅಂಕೋಲಾ ಗಡಿಭಾಗದ ಗುಳ್ಳಾಪುರದಲ್ಲಿ ಕೊಚ್ಚಿಹೋದ ಸೇತುವೆ ಮರು ನಿರ್ಮಾಣಕ್ಕಾಗಿ ಶಾಸಕ ಶಿವರಾಮ ಹೆಬ್ಬಾರ್ ಸಭೆ ನಡೆಸಿದ್ದಾರೆ. ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಅವರು ವಿವಿಧ ವಿಷಯಗಳ ಕುರಿತು ಸಲಹೆ ನೀಡಿದ್ದಾರೆ.
ಯಲ್ಲಾಪುರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಈ ಸಭೆ ನಡೆದಿದ್ದು, ಗುಣಮಟ್ಟದ ಸೇತುವೆ ನಿರ್ಮಾಣಕ್ಕೆ ಒತ್ತು ನೀಡುವಂತೆ ಶಿವರಾಮ ಹೆಬ್ಬಾರ್ ಸೂಚಿಸಿದ್ದಾರೆ. ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಡಿಪಿಆರ್ ಸಿದ್ಧಪಡಿಸುತ್ತಿರುವ ಗುತ್ತಿಗೆ ಸಂಸ್ಥೆಯ ತಾಂತ್ರಿಕ ತಂಡದೊoದಿಗೆ ಅವರು ಮಾತನಾಡಿದ್ದಾರೆ.
ಸೇತುವೆ ನಿರ್ಮಾಣ ಪ್ರಕ್ರಿಯೆಗೆ ಸಂಬoಧಿಸಿದ ತಾಂತ್ರಿಕ ಅಂಶಗಳ ಬಗ್ಗೆಯೂ ಅವರು ಈ ವೇಳೆ ಚರ್ಚಿಸಿದ್ದಾರೆ. ಸೇತುವೆಯ ವಿನ್ಯಾಸ, ವೆಚ್ಚ ಹಾಗೂ ಕಾರ್ಯಗತಿಯ ಕುರಿತು ಅಧಿಕಾರಿಗಳಿಂದ ಅವರು ಮಾಹಿತಿಪಡೆದಿದ್ದಾರೆ. `ಈ ಯೋಜನೆಯನ್ನು ವೇಗವಾಗಿ ಮುಗಿಸಬೇಕು. ಅದೇ ಪ್ರಮಾಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು’ ಎಂದು ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಶಿವಾನಂದ ನಾಯ್ಕ, ಕಾರ್ಯನಿರ್ವಾಹಕ ಇಂಜಿನಿಯರ್ ಎಸ್ ಎನ್ ಸಿದ್ಧಾಪುರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಂಜಯ ಪಾತ್ರೋಟ್ ಸಭೆಯಲ್ಲಿದ್ದು ಶಾಸಕರ ಮಾತು ಆಲಿಸಿದರು.