`ಲೋಕಧ್ವನಿ’ ಪತ್ರಿಕೆ ನೀಡುವ `ಹೆಮ್ಮೆಯ ಸಾಧಕ’ ಪ್ರಶಸ್ತಿಗೆ ಶಿರಸಿಯ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ ಸಿಕ್ಕಿದೆ.
ಗ್ರಾಹಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರಣ ಈ ಪ್ರಶಸ್ತಿಗೆ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘವನ್ನು ಆಯ್ಕೆ ಮಾಡಲಾಗಿದೆ. ಕಳೆದ 25 ವರ್ಷಗಳಿಂದ ಯಶಸ್ವಿಯಾಗಿ ಸಂಘ ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಲಾಗಿದ್ದು, ಸಂಘದ ಕಾರ್ಯ ಚಟುವಟಿಕೆಯ ಬಗ್ಗೆ ಲೋಕಧ್ವನಿ ಪತ್ರಿಕೆ ಬೆಳಕು ಚೆಲ್ಲಲಿದೆ. ಇದರೊಂದಿಗೆ ಸಂಘಕ್ಕೆ `ಲೋಕಧ್ವನಿ ಹೆಮ್ಮೆಯ ಸಾಧಕ ‘ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಕೆಡಿಸಿಸಿ ಬ್ಯಾಂಕ್ ವಿಭಾಗೀಯ ಅಧಿಕಾರಿಯಾಗಿದ್ದ ವಸಂತ ಶೆಟ್ಟಿ ಅವರು ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘದ ಸ್ಥಾಪಕರಾಗಿದ್ದು, ಅವರು ಕೆಡಿಸಿಸಿ ಬ್ಯಾಂಕ್ ನೌಕರರ ಒಕ್ಕೂಟ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಮರಣದ ನಂತರ ವಸಂತ ಶೆಟ್ಟಿ ಅವರ ಮಗ ವಿನಾಯಕ ಶೆಟ್ಟಿ ಅವರು ಸೊಸೈಟಿಯನ್ನು ಮುನ್ನಡೆಸುತ್ತಿದ್ದಾರೆ. ಶ್ರೀಧರ ಮೊಗೇರ್ ಅವರ ದೂರದೃಷ್ಠಿ ಹಾಗೂ ರಾಘವೇಂದ್ರ ಶೆಟ್ಟಿ ಅವರ ಪ್ರಾಮಾಣಿಕ ಪ್ರಯತ್ನ ಹಾಗೂ ಎಮ್ ಡಿ ಪ್ರಕಾಶ ಮುದ್ಗುಣಿ ಅವರ ಸಲಹೆಯಿಂದ ಸಂಘ ಶಿಸ್ತಿನಿಂದ ನಡೆಯುತ್ತಿದೆ.
ಈ ಎಲ್ಲಾ ವಿಷಯ ಗಮನಿಸಿ ಲೋಕಧ್ವನಿ ಪತ್ರಿಕೆ ಶ್ರೀ ಭೂತೇಶ್ವರ ಪತ್ತಿನ ಸಹಕಾರಿ ಸಂಘಕ್ಕೆ ವಿಶೇಷ ಮಾನ್ಯತೆ ನೀಡಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.