`ಜoಟಿ ಸದನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸುವ ರಾಜ್ಯಪಾಲರ ನಡೆ ಅಸಂವಿಧಾನಿಕ’ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಹೇಳಿದೆ
ಈ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯಕ ಅವರು ಪ್ರಕಟಣೆ ನೀಡಿದ್ದು, ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಸಂವಿಧಾನದ ವಿಧಿಯಂತೆ ನಡೆದುಕೊಂಡಿಲ್ಲ. ಜಂಟಿ ಸದನ ಅಧಿವೇಶನದಲ್ಲಿ ಸರಕಾರದ ಭಾಷಣ ಓದುವ ಬದಲು ತಮ್ಮದೇ ಮಾತನಾಡಿ ನಿರ್ಗಮಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ’ ಎಂದು ಹೇಳಿದ್ದಾರೆ.
`ರಾಜ್ಯಪಾಲರು ಕೇಂದ್ರ ಸರಕಾರದ ಮೂಲಕ ನೇಮಕಗೊಳ್ಳುವವರಾಗಿದ್ದು, ಅವರು ಚುನಾಯಿತ ಪ್ರತಿನಿಧಿಗಳಲ್ಲ. ರಾಜ್ಯ ಸರಕಾರದ ಅಥವಾ ಮಂತ್ರಿಮAಡಲ ಸಿದ್ಧಪಡಿಸಿದ ರಾಜ್ಯಪಾಲರ ಭಾಷಣವನ್ನು ರಾಜ್ಯ ಸರಕಾರವನ್ನು ಪ್ರತಿನಿಧಿಸಿ ಜಂಟಿ ಸದನದಲ್ಲಿ ಓದುವುದು ರಾಜ್ಯಪಾಲರ ಕರ್ತವ್ಯ. ಅದನ್ನು ತಮ್ಮ ಮನಬಂದAತೆ ತಿದ್ದುಪಡಿ ಮಾಡಿ ಭಾಷಣ ಮಾಡಲು ಅದು ಅವರ ವಯಕ್ತಿಕ ಭಾಷಣ ಅಲ್ಲ’ ಎಂದವರು ಹೇಳಿದ್ದಾರೆ. ಈಚೆಗೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರುಗಳು ತಾವು ರಾಜ್ಯ ಸರಕಾರವನ್ನು ಪ್ರತಿನಿಧಿಸುವವರೆಂಬುದನ್ನು ಮರೆತು ಕೇಂದ್ರ ಸರಕಾರದ ಪ್ರತಿನಿಧಿಯ ಹಾಗೇ ವರ್ತಿಸುತ್ತಿದ್ದಾರೆ. ಅದೇ ರಾಜ್ಯ ಸರ್ಕಾರದ ಜೊತೆ ನಿತ್ಯ ತಿಕ್ಕಾಟಕ್ಕೆ ಕಾರಣವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ’ ಎಂದು ಶಾಂತಾರಾಮ ನಾಯಕ ಅಭಿಪ್ರಾಯಪಟ್ಟಿದ್ದಾರೆ.
`ದೇಶದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸುವ ದಿಶೆಯಲ್ಲಿ ಕೇಂದ್ರ ಹಾಗು ರಾಜ್ಯ ಸಂಬAಧಗಳನ್ನು ಬಲಗೊಳಿಸುವ ಬದಲು ನರೇಂದ್ರ ಮೋದಿ ರಾಜ್ಯ ಸರಕಾರಗಳ ಸಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವಲ್ಲಿ ನಿರತವಾಗಿದ್ದಾರೆ. ಅದಕ್ಕಾಗಿ ರಾಜ್ಯಪಾಲರ ಕಛೇರಿ ಹಾಗು ಸ್ಥಾನವನ್ನು ದುರುಪಯೋಗ ಮಾಡುತ್ತಿದ್ದಾರೆ’ ಎಂದವರು ದೂರಿದ್ದಾರೆ.