ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಏಪ್ರಿಲ್-ಮೇ ಅವಧಿಯಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುತ್ತಿದೆ. ಜಲಜೀವನ ಯೋಜನೆ ಅಡಿ ಕೇಂದ್ರ ಸರ್ಕಾರ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಿದರೂ ಎಲ್ಲಾ ಕಡೆ ಅದು ಹಳ್ಳ ಹಿಡಿದಿದೆ. ಜೆಜೆಎಂ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಧಾನವ್ಯಕ್ತಪಡಿಸಿದ್ದು, ವಿನಾಕಾರಣ ವಿಳಂಬ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸೂಚಿಸಿದ್ದಾರೆ.
ಸೋಮವಾರ ಕಾರವಾರದಲ್ಲಿ ಸಭೆ ನಡೆಸಿದ ಅವರು `ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಮರುಕಳಿಸುವ ನಿಶ್ಚಿತ ಗ್ರಾಮಗಳನ್ನು ಗುರುತಿಸಬೇಕು. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಜೆಜೆಎಂ 2 ಹಂತದಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮವಹಿಸಬೇಕು’ ಎಂದು ಸೂಚಿಸಿದರು. `ಸರಿಯಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ನೋಟಿಸ್ ನೀಡಿ, ಕಪ್ಪು ಪಟ್ಟಿಗೆ ಸೇರಿಸಿ’ ಎಂದರು. `ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದ್ದು, ಈಗಾಗಲೇ ಗ್ರಾಮ ಪಂಚಾಯತ, ತಾಲೂಕು ಪಂಚಾಯತದಿAದ ಖಾಸಗಿ ಬೋರ್ವೆಲ್, ಕೊಳವೆ ಬಾವಿ ಹಾಗೂ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ. ಜೆಜೆಎಂ ಕಾಮಗಾರಿಗಳ ವಿಳಂಬದ ಕುರಿತು ದೂರುಗಳು ಬರುತ್ತಿದ್ದು, ಜೆಜೆಎಂ ಕಾಮಗಾರಿಗಳ ಕಳಪೆ ಕಾಮಗಾರಿ ಮತ್ತು ಗುಣಮಟ್ಟದಲ್ಲಿ ಲೋಪವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು’ ಎಂದರು.
ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ 965 ಕಾಮಗಾರಿಗಳ ಪೈಕಿ ಪ್ರಥಮ ಹಂತದಲ್ಲಿ 256, 2ನೇ ಹಂತದಲ್ಲಿ 228, 3 ನೇ ಹಂತದಲ್ಲಿ 26 ಹಾಗೂ 4 ಹಂತದಲ್ಲಿ 232 ಕಾಮಗಾರಿ ಮುಕ್ತಯವಾಗಿದೆ. ಪ್ರಥಮ ಹಂತದಲ್ಲಿ ಬಿಟ್ಟು ಹೋದ 250 ಗ್ರಾಮಗಳಿಗೆ ಜೆಜೆಎಂ 2 ಹಂತದಲ್ಲಿ ಮುಂದುವರಿಸಿಕೊoಡು ಹೊಗಲು ಅನುಮತಿ ದೊರೆತ್ತಿದ್ದು, ಜೆಜೆಎಂ, ಬಹುಗ್ರಾಮ ಕುಡಿಯುವ ನೀರು ಮತ್ತು ಅಮೃತ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಹಾಗೂ ನಿರ್ವಹಣೆಗೆ ಆದ್ಯತೆ ನೀಡಿದ್ದಲ್ಲಿ ಕುಡಿಯುವ ನೀರನ ಸಮಸ್ಯೆ ಬಗೆಹರಿಸಬಹುದಾಗಿದ್ದು, ಅಧಿಕಾರಿಗಳು ತಳ ಮಟ್ಟದಿಂದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ, ಜನರಿಗೆ ಯೋಜನೆಯ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಿಲೀಷ್ ಶಶಿ ಮಾತನಾಡಿ `ಹಳಿಯಾಳ, ಮುಂಡಗೋಡನಲ್ಲಿ ಖಾಸಗಿ ಬೋರ್ವೇಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, 31 ಗ್ರಾಮ ಪಂಚಾಯತನಲ್ಲಿ 68 ಕಡೆ ಹಾಗೂ ಮಂಕಿಯ 16 ವಾರ್ಡನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ’ ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಇತರರಿದ್ದರು.