ಕಾರವಾರದಿಂದ ಭಟ್ಕಳದವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶುರುವಾಗಿ 15 ವರ್ಷ ಕಳೆದರೂ ಅದು ಮುಕ್ತಾಯವಾಗದ ಬಗ್ಗೆ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅಸಮಧಾನವ್ಯಕ್ತಪಡಿಸಿದ್ದಾರೆ. ಶಿರಸಿಯಿಂದ ಹಾವೇರಿವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಲೂ ಮಳೆಗಾಲದಲ್ಲಿ ಸಾರ್ವಜನಿರಿಗೆ ತೊಂದರೆಯಾಗದ ಹಾಗೇ ತುರ್ತು ಕ್ರಮ ಜರುಗಿಸಬೇಕು’ ಎಂದು ಅವರು ತಾಕೀತು ಮಾಡಿದ್ದಾರೆ.
`ಕಾಮಗಾರಿಯ ಮುಕ್ತಾಯಕ್ಕೆ ಅನಗತ್ಯ ವಿಳಂಬ ಮಾಡದೇ ಬಾಕಿ ಇರುವ ಎಲ್ಲಾ ಪ್ರಪೋಸಲ್ ಒಂದೇ ಬಾರಿ ಸಲ್ಲಿಸಿ ಅಗತ್ಯ ಅನುಮೋದನೆ ಪಡೆದು ಕಾಮಗಾರಿಗೆ ವೇಗ ನೀಡಬೇಕು. ಮಳೆಗಾಲಕ್ಕೆ ಮುಂಚೆ ಒಂದು ಲೇಯರ್ ಆದರೂ ಡಾಂಬರ್ ಹಾಕಿ ವಾಹನ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು’ ಎಂದವರು ಸೂಚಿಸಿದ್ದಾರೆ. ಕಾಮಗಾರಿ ಮುಕ್ತಾಯಕ್ಕೆ ನಿಗಧಿಪಡಿಸಿರುವ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡದಂತೆ ನಿರ್ದೇಶನ ನೀಡಿದ್ದಾರೆ.
`ಶಿರಸಿ-ಹಾವೇರಿ ರಸ್ತೆಯಲ್ಲಿ ಸಾರ್ವಜನಿಕರಿಗೆ ಉಸಿರು ಕಟ್ಟುವ ವಾತಾವರಣ ನಿರ್ಮಾಣವಾಗಿದೆ. ಧೂಳಿನಿಂದ ಉಸಿರಾಟ ಸಮಸ್ಯೆ ಕಂಡುಬರುತ್ತಿದೆ. ಕೊನೆಯ ಪಕ್ಷ ಧೂಳು ಏಳದಂತೆ ನೀರು ಸಿಂಪಡಿಸುವ ಕೆಲಸವೂ ಆಗುತ್ತಿಲ್ಲ’ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ಅಸಮಧಾನವ್ಯಕ್ತಪಡಿಸಿದ್ದಾರೆ. `ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳ ಪಕ್ಕದಲ್ಲಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಮ್ ದಾಸ್ಥಾನು ಇರುವಂತೆ ನೋಡಿಕೊಳ್ಳಬೇಕು. ಅಂಗನವಾಡಿ, ಶಾಲೆ ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು. ಯಾವುದೇ ಅನಾಹುತ ಸಂಭವಿಸಿದಲ್ಲಿ 24 ಗಂಟೆಯ ಒಳಗೆ ಪರಿಹಾರ ವಿತರಿಸಬೇಕು’ ಎಂದು ಸಚಿವರು ಸೂಚಿಸಿದ್ದಾರೆ.