• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A rowdy who threatened the police!

ಪೊಲೀಸರ ಮೇಲೆ ದಾಳಿ: ಪಿಸೈಯಿಂದಲೇ ದೂರು!

June 15, 2026
A rowdy who threatened the police!

ಪೊಲೀಸರನ್ನೇ ಬೆದರಿಸಿದ ರೌಡಿ!

June 15, 2026
A barrage of questions BJP protests against the administrative system

ಪ್ರಶ್ನೆಗಳ ಸುರಿಮಳೆ: ಆಡಳಿತ ವ್ಯವಸ್ಥೆ ವಿರುದ್ಧ ಬಿಜೆಪಿ ಪ್ರತಿಭಟನೆ

June 15, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A rowdy who threatened the police!

ಪೊಲೀಸರ ಮೇಲೆ ದಾಳಿ: ಪಿಸೈಯಿಂದಲೇ ದೂರು!

June 15, 2026
A rowdy who threatened the police!

ಪೊಲೀಸರನ್ನೇ ಬೆದರಿಸಿದ ರೌಡಿ!

June 15, 2026
A barrage of questions BJP protests against the administrative system

ಪ್ರಶ್ನೆಗಳ ಸುರಿಮಳೆ: ಆಡಳಿತ ವ್ಯವಸ್ಥೆ ವಿರುದ್ಧ ಬಿಜೆಪಿ ಪ್ರತಿಭಟನೆ

June 15, 2026

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

ADVERTISEMENT
  • Home
Tuesday, June 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರಶ್ನೆಗಳ ಸುರಿಮಳೆ: ಆಡಳಿತ ವ್ಯವಸ್ಥೆ ವಿರುದ್ಧ ಬಿಜೆಪಿ ಪ್ರತಿಭಟನೆ

Achyutkumar by Achyutkumar
June 15, 2026
A barrage of questions BJP protests against the administrative system
Share on FacebookShare on WhatsappShare on Twitter

ಯಲ್ಲಾಪುರದಲ್ಲಿನ ಆಡಳಿತ ವ್ಯವಸ್ಥೆಯ ಲೋಪಗಳನ್ನು ಪ್ರಶ್ನಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ತೇಲಿ ಬಂದ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರಿಸುವ ಪ್ರಯತ್ನ ಮಾಡಿದ್ದಾರೆ. ಕೆಲ ಪ್ರಶ್ನೆಗಳಿಗೆ ಸರಿಯಾದ ಉತ್ತರ ಸಿಗದ ಕಾರಣ ಪ್ರತಿಭಟನಾಕಾರರು ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

ಯಲ್ಲಾಪುರ ಪಟ್ಟಣದ ಹೆಬ್ಬಾರ್ ನಗರದಲ್ಲಿ ನಿರ್ಮಿಸಲಾದ ಜಿ+2 ಮನೆಗಳ ವಿತರಣೆ, ವನ್ಯಜೀವಿ ದಾಳಿಗೆ ಒಳಗಾದವರಿಗೆ ನೀಡಿದ ಪರಿಹಾರದಲ್ಲಿನ ತಾರತಮ್ಯ, ತಾಲೂಕು ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ, ಮಳೆ ಮಾಪನ ಕೇಂದ್ರಗಳ ದುರಸ್ಥಿ ವಿಷಯವಾಗಿ ಬಿಜೆಪಿಗರು ಪ್ರತಿಭಟನೆಯಲ್ಲಿ ಪ್ರಶ್ನಿಸಿದ್ದಾರೆ. `ಮನೆ ವಿತರಣೆ ವಿಷಯದ ಕುರಿತು ತಾಲೂಕಾ ಆಡಳಿತ ಸಭೆ ಕಡೆಯಬೇಕು. ಶಾಸಕರ ಉಪಸ್ಥಿತಿಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಕೋಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳ ಜೊತೆ ಪಲಾನುಭವಿಗಳನ್ನು ಸಭೆಗೆ ಆಮಂತ್ರಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. `ನಿರ್ಮಿಸಲಾದ ಮನೆಗಳನ್ನು ಫಲಾನುಭವಿಗಳಿಗೆ ಯಾವಾಗ ಹಸ್ತಾಂತರಿಸಲಾಗುತ್ತದೆ? ಎಂಬ ಪ್ರಶ್ನೆಗೆ ಉತ್ತರಬೇಕು’ ಎಂದು ಪಟ್ಟುಹಿಡಿದರು. `ಕೋಳಗೇರಿ ಅಭಿವೃದ್ಧಿ ಮಂಡಳಿ ಹೆಸರಿನಲ್ಲಿ ಸೂಚಿಸಿದ್ದಕ್ಕಿಂತ ಹೆಚ್ಚುವರಿ ಹಣ ವಸೂಲಾತಿ ಮಾಡಲಾಗುತ್ತಿದೆ’ ಎಂದು ದೂರಿದರು.

ADVERTISEMENT

ಇದಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೇಶವ ಚೌಗಲೆ ಪ್ರತಿಕ್ರಿಯಿಸಿ `ಕೊಳಗೇರಿ ಅಭಿವೃದ್ಧಿ ಮಂಡಳಿ ಪಟ್ಟಣ ಪಂಚಾಯಿತಿಗೆ ಮನೆಗಳನ್ನು ಹಸ್ತಾಂತರಿಸಿಲ್ಲ. ಹಸ್ತಾಂತರ ಆದ ತಕ್ಷಣ ನಿಯಮಾನುಸಾರ ಫಲಾನುಭವಿಗಳಿಗೆ ಒದಗಿಸಲಾಗುತ್ತದೆ’ ಎಂದರು. ಈ ಉತ್ತರದಿಂದ ಪ್ರತಿಭಟನಾಕಾರರು ಸಮಾಧಾನಗೊಳ್ಳಲಿಲ್ಲ. `ಯಲ್ಲಾಪುರ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರು ಇಲ್ಲದೇ ಸಮಸ್ಯೆ ಉಂಟಾಗಿದೆ’ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದರು. ತಾಲೂಕು ವೈದ್ಯಾಧಿಕಾರಿ ಡಾ ನರೇಂದ್ರ ಪವಾರ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದು, `ತಾಲೂಕು ಆಸ್ಪತ್ರೆಗೆ ಈಗಾಗಲೇ ಹಿಂದಿನ ಪ್ರಸೂತಿ ತಜ್ಞರನ್ನು ನಿಯೋಜಿಸಲಾಗಿದೆ. ಅವರು ವಾರದಲ್ಲಿ ಮೂರು ದಿನ ಇಲ್ಲಿಯೇ ಸೇವೆ ಸಲ್ಲಿಸಲಿದ್ದಾರೆ’ ಎಂಬ ಮಾಹಿತಿ ನೀಡಿದರು. ಮಳೆ ಮಾಪನ ಕೇಂದ್ರಗಳ ದುಸ್ಥಿತಿಯ ಬಗ್ಗೆ ಪ್ರತಿಭಟನಾಕಾರರು ಗಮನಸೆಳೆದರು. `ಮಳೆ ಮಾಪನ ಕೇಂದ್ರಗಳು ಸರಿಯಿಲ್ಲದ ಕಾರಣ ರೈತರಿಗೆ ಅನ್ಯಾಯವಾಗುತ್ತಿದೆ’ ಎಂದು ವಿವರಿಸಿದರು. ಕರಡಿ ದಾಳಿಯಿಂದ ಅಂಗವಿಕಲರಾದವರಿಗೆ ನೀಡಿದ ಪರಿಹಾರದಲ್ಲಿ ತಾರತಮ್ಯವಾಗಿದೆ. ಶಾಸಕರ ಆಪ್ತರಿಗೆ 10 ಲಕ್ಷ ರೂ ಪರಿಹಾರ ಹಾಗೂ 4 ಸಾವಿರ ರೂ ಮಾಸಾಶನ ನೀಡಲಾಗುತ್ತಿದೆ. ಆದರೆ, ಬಡವರಿಗೆ 5 ಲಕ್ಷ ರೂ ಪರಿಹಾರ ಮಾತ್ರ ನೀಡಲಾಗಿದೆ’ ಎಂದು ದೂರಿದರು.

ADVERTISEMENT

ತಹಶೀಲ್ದಾರ ಮಧುಸೂದನ ಆರ್ ಕುಲಕರ್ಣಿ ಅವು ಮಾತನಾಡಿ `ಈ ಎಲ್ಲ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರವಾದ ವರದಿ ಸಲ್ಲಿಸಲಾಗುತ್ತದೆ. ಮಳೆ ಮಾಪನದ ರಿಪೇರಿಗೆ ಈಗಾಗಲೇ ಟೆಂಡರ್ ಆಗಿದ್ದು ಜೂನ್ ಅಂತ್ಯದ ವೇಳೆಗೆ ಎಲ್ಲ ಮಳೆ ಮಾಪನ ಯಂತ್ರಗಳು ರಿಪೇರಿ ಆಗಲಿವೆ’ ಎಂಬ ಭರವಸೆ ನೀಡಿದರು. ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಪ್ರತಿಭಟನೆ ಮುಂದಾಳತ್ವವಹಿಸಿದ್ದು, ಪ್ರಮುಖರಾದ ಎಲ್ ಟಿ ಪಾಟೀಲ, ಉಮೇಶ ಭಾಗೃತ, ಶ್ಯಾಮಿಲಿ ಪಾಟಣಕರ, ಸೋಮೇಶ್ವರ ನಾಯ್ಕ, ರಮೇಶ ನಾಯ್ಕ ಅವರು ಪ್ರತಿಭಟನೆಯಲ್ಲಿ ಮಾತನಾಡಿದರು. ಪ್ರಮುಖರಾದ ನಟರಾಜ ಗೌಡರ್, ರಾಘವೇಂದ್ರ ಭಟ್ಟ, ರಾಮು ನಾಯ್ಕ, ರವಿ ಕೈಟ್ಕರ ಇತರರು ಪ್ರತಿಭಟನೆಯಲ್ಲಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A rowdy who threatened the police!

ಪೊಲೀಸರ ಮೇಲೆ ದಾಳಿ: ಪಿಸೈಯಿಂದಲೇ ದೂರು!

June 15, 2026
A rowdy who threatened the police!

ಪೊಲೀಸರನ್ನೇ ಬೆದರಿಸಿದ ರೌಡಿ!

June 15, 2026
A barrage of questions BJP protests against the administrative system

ಪ್ರಶ್ನೆಗಳ ಸುರಿಮಳೆ: ಆಡಳಿತ ವ್ಯವಸ್ಥೆ ವಿರುದ್ಧ ಬಿಜೆಪಿ ಪ್ರತಿಭಟನೆ

June 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋