33 ವರ್ಷಗಳಿಂದ ಅರಣ್ಯ ಅತಿಕ್ರಮಣ ಹೋರಾಟದ ಮೂಲಕ ಸದ್ದು ಮಾಡುತ್ತಿರುವ ಶಿರಸಿ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಇದೀಗ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಸ್ನೇಹ ಬೆಳೆಸಿದ್ದಾರೆ. ಕಾಂಗ್ರೆಸ್ಸಿನಲ್ಲಿಯೇ ಇದ್ದರೂ ತತ್ವ-ಸಿದ್ಧಾಂತ ಕಾರಣದಿಂದ ದೊಡ್ಡ ದೊಡ್ಡ ನಾಯಕರಿಂದ ಕೊಂಚ ಅಂತರ ಕಾಯ್ದುಕೊಂಡಿದ್ದ ರವೀಂದ್ರ ನಾಯ್ಕ ಅವರು ಡಿಕೆ ಶಿವಕುಮಾರ ಅವರಿಗೆ ಹತ್ತಿರವಾಗಿದ್ದಾರೆ.
ಡಿ ಕೆ ಶಿವಕುಮಾರ ಅವರು ಕರ್ನಾಟಕ ಸರ್ಕಾರದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದೆ. ಹೀಗಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ ಅವರಿಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಶುಭಾಶಯ ಕೋರಿದ್ದಾರೆ. `ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಯಾಗಿ ಜಿಲ್ಲೆಯ ಅಭಿವೃದ್ದಿ, ಯುವ ಜನಾಂಗದ ಸ್ವಾವಲಂಭನೆ ಮತ್ತು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಪ್ರಾತಿನಿಧ್ಯ ಕೊಡಬೇಕು’ ಎಂದು ಸಹ ರವೀಂದ್ರ ನಾಯ್ಕ ಅವರು ಮನವಿ ಮಾಡಿದ್ದಾರೆ.
`ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅನುಯಾಯಿಗಳಾಗಿ ಆಡಳಿತ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯದ ಸಿದ್ದಾಂತ ಪ್ರತಿಪಾದಿಸುವ ಹಾಗಾಗಲಿ’ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.