ರಾಜ್ಯದಲ್ಲಿನ ಅತಿವೃಷ್ಟಿ ಹಾಗೂ ಅನಾವೃಷ್ಟಿ ಅಧ್ಯಯನಕ್ಕೆ ಬಿಜೆಪಿ ತಂಡ ರಚಿಸಿದೆ. ಈ ತಂಡದಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಿಂದ ಗಣಪತಿ ಉಳ್ವೇಕರ್ ಅವರ ಜೊತೆ ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಈ ತಂಡದಲ್ಲಿದ್ದಾರೆ. ಕರ್ನಾಟಕದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂಭವಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಬರ ಅಧ್ಯಯನ ನಡೆಸಲು ಪ್ರಮುಖರ ತಂಡವನ್ನು ರಚಿಸಿದ್ದು, ಜಿಲ್ಲಾ ಕೇಂದ್ರ ಹಾಗೂ ತಾಲೂಕುಗಳಿಗೆ ಭೇಟಿ ನೀಡಿ ಸಮಗ್ರ ವರದಿ ನೀಡುವಂತೆ ಸೂಚಿಸಲಾಗಿದೆ. ರಾಜ್ಯದ ಇನ್ನಿತರ ಕಡೆಗಳಲ್ಲಿಯೂ ಬಿಜೆಪಿ ತಂಡ ರಚಿಸಿ, ಕ್ಷೇತ್ರ ಅಧ್ಯಯನಕ್ಕೆ ಸೂಚಿಸಿದೆ.
ಬಿಜೆಪಿ ಪ್ರಮುಖರಾದ ಎನ್ ರವಿಕುಮಾರ, ಮುರುಗೇಶ ನಿರಾಣಿ, ಅರವಿಂದ ಬೆಲ್ಲದ್, ಸಿದ್ದು ಸವದಿ, ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ಶಶಿಕಲಾ ಜೊಲ್ಲೆ, ಮಹೇಶ ಟೆಂಗಿನಕಾಯಿ, ವಿಠ್ಠಲ ಹಲಗೇಕರ್, ದುರ್ಯೋದನ ಐಹೊಳೆ, ಜಗದೀಶ ಗುಡಗಂಟಿ, ಎಂ ಆರ್ ಪಾಟೀಲ್, ನಿಕಿಲ್ ಕತ್ತಿ, ಎಚ್ ಪಿ ಪೂಜಾರ್, ಹನುಮಂತ ನಿರಾಣಿ, ಪ್ರದೀಪ ಶೆಟ್ಟಿ ಹಾಗೂ ಲಿಂಗರಾಜ್ ಪಾಟೀಲ್ ಅವರು ಉತ್ತರ ಕನ್ನಡ ಜಿಲ್ಲೆಯ ಬರ ಅಧ್ಯಯನ ನಡೆಸಲಿದ್ದಾರೆ. ಉತ್ತರ ಕನ್ನಡದ ಜೊತೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ ಹಾಗೂ ಹಾವೇರಿ ಭಾಗದಲ್ಲಿಯೂ ಅಧ್ಯಯನ ನಡೆಸುವಂತೆ ಈ ತಂಡಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸೂಚಿಸಿದ್ದಾರೆ.