ನಿಗದಿಪಡಿಸಿದ ತೂಕಕ್ಕಿಂತ ಹೆಚ್ಚಿನ ಬಾರ ಹೊತ್ತು ಸಂಚರಿಸುವ ಸರಕು ಸಾಮಗ್ರಿ ವಾಹನಗಳ ಮೇಲೆ ಕಠಿಣ ಕ್ರಮ ಜರುಗಿಸಲು ಜಿಲ್ಲಾಡಳಿತ ಮುಂದಾಗಿದೆ. `ಓವರ್ ಲೋಡ್ ಹೊತ್ತು ಸಾಗುವ ವಾಹನಗಳನ್ನು ತಡೆದು ಪ್ರಕರಣ ದಾಖಲಿಸಿ’ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
`ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಎಲ್ಲಾ ಪ್ರಮುಖ ರಸ್ತೆಗಳಲ್ಲಿ ನಿಯಮಿತವಾಗಿ ತಪಾಸಣೆಗಳನ್ನು ನಡೆಸಬೇಕು. ನಿಗಧಿತ ಮಿತಿಗಿಂತ ಹೆಚ್ಚಿನ ಸರಕು ಸಾಮಗ್ರಿ ಸಾಗಿಸುವ ವಾಹನಗಳ ವಿರುದ್ದ ಪ್ರಕರಣ ದಾಖಲಿಸಬೇಕು. ಖಾಸಗಿ ಸಾರಿಗೆ ಬಸ್ಸುಗಳ ಡಿಕ್ಕಿಯಲ್ಲಿ ಪ್ರಯಾಣಿಕರ ಲಗೇಜ್ ಹೊರತುಪಡಿಸಿ ಇತರ ಸಾಮಗ್ರಿಗಳನ್ನು ಸಾಗಿಸುವುದರ ಬಗ್ಗೆಯೂ ತಪಾಸಣೆ ನಡೆಸಬೇಕು. ದೂರದ ಸ್ಥಳಗಳಿಗೆ ಪ್ರಯಾಣಿಸುವ ಬಸ್ಸುಗಳಲ್ಲಿ ಇಬ್ಬರು ಚಾಲಕರು ಇರುವ ಹಾಗೇ ನೋಡಿಕೊಳ್ಳಬೇಕು’ ಎಂದು ಕ್ಟುನಿಟ್ಟಾಗಿ ಹೇಳಿದ್ದಾರೆ. `ಕಾರವಾರದ ಫ್ಲೆöÊ ಓವರ್ ಕೆಳಗೆ ಅಂಗಡಿಗಳು ಮತ್ತು ಜನವಸತಿ ಕಂಡುಬರುತ್ತಿದ್ದು, ಈ ಬಗ್ಗೆ ರಾಷ್ಟಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.
`ಈಚೆಗೆ ಕುಮಟಾದಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು ಅಗತ್ಯವಿರುವಡೆಗಳಲ್ಲಿ ಬೀದಿದೀಪಗಳನ್ನು ಅಳವಡಿಸಬೇಕು. ರಸ್ತೆಗಳಿಗೆ ಲೈನ್ ಮಾರ್ಕ್ ಮತ್ತು ಕ್ಯಾಟ್ ಐ ಗಳನ್ನು ಅಳವಡಿಸಬೇಕು. ಹೆದ್ದಾರಿಯ ಪಕ್ಕದಲ್ಲಿ ಗುಡ್ಡಗಳಿಂದ ಜಲಪಾತದ ರೀತಿಯಲ್ಲಿ ನೀರು ಬೀಳುವ ಪ್ರದೇಶದಲ್ಲಿ ಸಾರ್ವಜನಿಕರು ರಸ್ತೆಯಲ್ಲಿಯೇ ವಾಹನಗಳನ್ನು ನಿಲ್ಲಿಸಿ ಪೋಟೋ ಮತ್ತು ವೀಡಿಯೋ ಚಿತ್ರೀಕರಣ ಮಾಡುತ್ತಿದ್ದು, ಇದರಿಂದ ಅಪಘಾತಗಳಾಗುವ ಸಾಧ್ಯತೆಗಳಿರುವುದರಿಂದ ಇಂತಹ ಪ್ರದೇಶದಲ್ಲಿ ನೋ ಪಾರ್ಕಿಂಗ್ ಸೇರಿದಂತೆ ಇತರೇ ಅಗತ್ಯ ಎಚ್ಚರಿಕೆ ಫಲಕಗಳನ್ನು ಅಳವಡಿಸಿ’ ಎಂದು ಹೇಳಿದರು. `ಘಟ್ಟ ಪ್ರದೇಶದಿಂದ ಆಗಮಿಸುವ ವಾಹನಗಳ ಚಾಲಕರಿಗೆ ಮುಂದೆ ಎಷ್ಟು ತಿರುವುಗಳು ಇವೆ ಎಂಬ ಬಗ್ಗೆ ಮಾಹಿತಿ ಇಲ್ಲದ ಕಾರಣ ವೇಗವಾಗಿ ವಾಹನ ಚಲಾಯಿಸಿ ಹೆಚ್ಚಿನ ಸಂಖ್ಯೆಯ ಅಪಘಾತಗಳು ಸಂಭವಿಸುತ್ತಿವೆ. `ಇಳಿಜಾರು ಪ್ರದೇಶ ಆರಂಭವಾಗುವ ಸ್ಥಳದಿಂದಲೇ ಮುಂದೆ ಎಷ್ಟನೇ ತಿರುವು ಇದೆ ಎಂಬ ಸಂಖ್ಯೆಗಳ ಮಾಹಿತಿಯನ್ನು ಒಳಗೊಂಡ ಸೂಚನಾ ಫಲಕಗಳನ್ನು ಅಳವಡಿಸಿ. ಎಲ್ಲಾ ಸೇತುವೆಗಳ ಬಗ್ಗೆ ಸೂಚನಾ ಫಲಕ ಮತ್ತು ರಾತ್ರಿ ವೇಳೆ ಸೇತುವೆ ಸ್ಪಷ್ಟವಾಗಿ ಗೋಚರವಾಗುವಂತೆ ಕ್ರಮ ಕೈಗೊಳ್ಳಬೇಕು’ ಎಂದರು.
`ಪೊಲೀಸ್ ಇಲಾಖೆಯ ಸೂಚನೆಯಂತೆ ಅಗತ್ಯವಿರುವೆಡೆಗಳಲ್ಲಿ ಎ.ಎನ್.ಪಿ.ಆರ್ ಕೆಮರಗಳನ್ನು ಅಳವಡಿಸಬೇಕು. ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು, ವೇಗಮಿತಿ ಸೂಚನಾ ಫಲಕಗಳು ಮತ್ತು ಬ್ಲಿಂರ್ಸ್ ಗಳನ್ನು ಅಳವಡಿಸಬೇಕು’ ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಉಪವಿಭಾಗಧಿಕಾರಿ ಶ್ರವಣಕುಮಾರ್, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತಿತರರು ಇದ್ದರು.