ಆರ್ಯ, ಈಡಿಗ, ನಾಮಧಾರಿ, ಬಿಲ್ಲವ ಸೇರಿ ಅನೇಕ ಸಮುದಾಯದ ಒಳಿತಿಗಾಗಿ ಶ್ರೀ ರಾಮ ಕ್ಷೇತ್ರ ಸಂಸ್ಥಾನ ಜಗದ್ಗುರು ಪೀಠ ಶ್ರಮಿಸುತ್ತಿದ್ದು, ಈ ಶಕ್ತಿಪೀಠದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರು ಈ ಬಾರಿ ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಾವಿರಾರು ಭಕ್ತರು ಈ ಪವಿತ್ರ ವೃತಾಚರಣೆಯಲ್ಲಿ ಭಾಗವಹಿಸಿ ಸೇವೆ ಸಲ್ಲಿಸಲು ಸನ್ನಿದ್ಧರಾಗಿದ್ದಾರೆ.
ಜುಲೈ 29ರಿಂದ ಸೆಪ್ಟೆಂಬರ್ 14ರವರೆಗೆ ಶ್ರೀ ಉಡುಪಿಯ ಬೈಂದೂರಿನ ಗೋಳಿಹೊಳೆ ಶ್ರೀ ಬಿಳಿಶಿಲೆ ವಿನಾಯಕ ದೇವಸ್ಥಾನದ ಆವಾರದಲ್ಲಿ ಶ್ರೀಗಳ ಚಾರ್ತುಮಾಸ್ಯ ವೃತ ಆಚರಣೆ ನಡೆಯಲಿದೆ. `ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತೀಜೀ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ಎಲ್ಲಾ ಬಗೆಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ಶ್ರೀ ರಾಮ ಕ್ಷೇತ್ರ ಸಂಸ್ಥಾನ ಜಗದ್ಗುರು ಪೀಠದ ಶಿರಸಿ ವಿಭಾಗೀಯ ಅಧ್ಯಕ್ಷ ವೆಂಕಟೇಶ ನಾಯ್ಕ ಅವರು ಮಾಹಿತಿ ನೀಡಿದ್ದಾರೆ. ಆರ್ಯ, ಈಡಿಗ, ನಾಮಧಾರಿ, ಬಿಲ್ಲವ ಅಭಿವೃದ್ಧಿ ಸಂಘದಿoದ ಜಂಟಿ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅವರು ವಿವರಿಸಿದ್ದಾರೆ.
`ಈ ಬಾರಿಯ ಚಾತುರ್ಮಾಸ್ಯವು ದಿನಾಂಕ ಜುಲೈ 29ರ ಬುಧವಾರ ಗುರುಪೂರ್ಣಿಮೆಯ ದಿನ ಮುಂಜಾನೆ 07 ಗಂಟೆಗೆ ಆರಂಭವಾಗಲಿದ್ದು, ರಾಮತಾರಕ ಯಜ್ಞ ಹಾಗೂ ವೈದಿಕ ವಿಧಿ ವಿಧಾನಗಳು ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಬೈಂದೂರು ಶ್ರೀ ಸೇನೇಶ್ವರ ದೇವರಿಗೆ ಪೂಜೆ ಸಲ್ಲಿಸಿ ಶ್ರೀಗಳ ಪುರ ಪ್ರವೇಶದ ಭವ್ಯ ಮೆರವಣಿಗೆ ಆರಂಭವಾಗಲಿದೆ. 11 ಗಂಟೆಗೆ ಶ್ರೀಗಳ ವ್ಯಾಸ ಪೀಠಾರೋಹಣ, ಗುರು ಪಾದುಕಾ ಪೂಜೆ, ಶ್ರೀಗಳಿಂದ ಆಶೀರ್ವಚನ, ಪ್ರಸಾದ ಮಂತ್ರಾಕ್ಷತೆ ಸಮೇತ ಅನ್ನ ಸಂತರ್ಪಣೆ ನಡೆಯಲಿದೆ’ ಎಂದವರು ಮಾಹಿತಿ ನೀಡಿದ್ದಾರೆ. `ಪ್ರತಿದಿನ ಧರ್ಮಸಭೆಗಳು, ಭಜನೆ, ಪಾದುಕಾಪೂಜೆ, ಆಶೀರ್ವಚನ, ಮಂತ್ರಾಕ್ಷತೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದ್ದು, ಸಂಜೆ 5:30ರಿಂದ ವಿವಿಧ ಭಕ್ತಿ ಪ್ರದಾನ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ದಿನಾಂಕ ಸೆಪ್ಟೆಂಬರ್ 14ರ ನೇ ಸೋಮವಾರ ವ್ರತಾಚರಣೆ ಪೂರ್ಣಗೊಳ್ಳಲಿದ್ದು, ಅದೇ ದಿನ ಬೆಳಿಗ್ಗೆ ಶ್ರೀಗಳ ಸೀಮೋಲಂಘನ ಕಾರ್ಯಕ್ರಮವು ಉಪ್ಪುಂದದ ಶ್ರೀ ದುರ್ಗಾ ಪರಮೇಶ್ವರಿ ದೇವಾಲಯದ ತಟದಲ್ಲಿರುವ ಸುಮನಾವತಿ ನದಿಯಲ್ಲಿ ಗಂಗಾಪೂಜೆ ಸಲ್ಲಿಸುವುದರೊಂದಿಗೆ ಸಮಾಪನೆಗೊಳ್ಳಲಿದೆ’ ಎಂದವರು ತಿಳಿಸಿದರು.
`ದೇಶದ ಬೇರೆ ಬೇರೆ ಭಾಗಗಳಲ್ಲಿ ಇರುವ ಶ್ರೀ ಪೀಠದ ಶಾಖಾ ಮಠದ ವ್ಯಾಪ್ತಿಯ ಲಕ್ಷಾಂತರ ಭಕ್ತರು ಭೇಟಿ ನೀಡುವ ಸಾಧ್ಯತೆಯಿದ್ದು, ಬಂದAತಹ ಭಕ್ತಾದಿಗಳಿಗೆ ಊಟ ಉಪಹಾರ ಸೇರಿದಂತೆ ಸುಲಭ ದರ್ಶನ ಹಾಗೂ ಸೇವೆ ಸಲ್ಲಿಸಲು ಅಗತ್ಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಎಲ್ಲಾ ಸಿದ್ಧತೆಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ’ ಎಂದವರು ಮಾಹಿತಿ ನೀಡಿದರು. `ಧರ್ಮಸಭೆಯ ಉದ್ಘಾಟನೆಯನ್ನು ಬಿಜೆಪಿಯ ರಾಷ್ಟಿಯ ಪ್ರಧಾನ ಕಾರ್ಯದರ್ಶಿಗಳಾದ ಬಿ ಎಲ್ ಸಂತೋಷ ಅವರು ನೆರವೇರಿಸಲಿದ್ದು, ಸಭಾಧ್ಯಕ್ಷತೆಯನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ.ಪಿ.ಸಿ.ಸಿಯ ಬಿ ಕೆ ಹರಿಪ್ರಸಾದ್, ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಬ್ರೀಜೇಶ್ ಚೌಟಾ, ಮಾಜಿ ಸಚಿವರಾದ ಮಂಕಾಳು ಎಸ್ ವೈದ್ಯ, ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ, ಶಾಸಕರಾದ ಸುನಿಲ್ ಕುಮಾರ, ಗುರ್ಮೆ ಸುರೇಶ ಶೆಟ್ಟಿ, ಆರ್ ವಿ ದೇಶಪಾಂಡೆ, ಶಿವರಾಮ್ ಹೆಬ್ಬಾರ್, ಸತೀಶ್ ಸೈಲ್, ದಿನಕರ ಶೆಟ್ಟಿ, ಎಸ್ ಎಲ್ ಭೋಜೇಗೌಡ, ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಜಗದ್ಗುರು ಪೀಠದ ಟ್ರಸ್ಟಿಗಳು ಹಾಗೂ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ ನಾಯ್ಕ ಸೇರಿದಂತೆ ರಾಜ್ಯ ಮತ್ತು ದೇಶ ಮಟ್ಟದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯೊಂದಿಗೆ ಗುರುತಿಸಿಕೊಂಡ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ’ ಎಂದವರು ಮಾಹಿತಿ ನೀಡಿದರು.
`ಸನಾತನ ಭಕ್ತಿ ಪರಂಪರೆಯ ಧರ್ಮ ರಕ್ಷಣೆಗಾಗಿ ನಡೆಯುತ್ತಿರುವ ಈ ಚಾರ್ತುಮಾಸ್ಯ ವ್ರತಾಚರಣೆಯ ಸಂದರ್ಭದಲ್ಲಿ ಎಲ್ಲಾ ಸಮಾಜ ಕುಲ ಬಾಂಧವರು, ಶ್ರೀ ಪೀಠಕ್ಕೆ ನಡೆದುಕೊಳ್ಳುವ ಎಲ್ಲಾ ಭಕ್ತಾದಿಗಳು, ಸಕುಟುಂಬ ಬಂಧು – ಬಾಂಧವರ ಸಮೇತರಾಗಿ ಭಾಗವಹಿಸಬೇಕು. ಫಲ ಮಂತ್ರಾಕ್ಷತೆ ಸ್ವೀಕರಿಸಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕು’ ಎಂದು ಮನವಿ ಮಾಡಿದರು. ಯುವ ಮುಖಂಡ ಹಾಗೂ ಉದ್ಯಮಿ ಅಶ್ವಿನ್ ಭೀಮಣ್ಣ ನಾಯ್ಕ, ಶ್ರೀರಾಮ ಕ್ಷೇತ್ರ ಸಮಿತಿಯ ಗೌರವಾಧ್ಯಕ್ಷ ಆರ್ ಜಿ ನಾಯ್ಕ, ಶಿರಸಿ ತಾಲೂಕು ಆರ್ಯ, ಈಡಿಗ, ನಾಮಧಾರಿ, ಬಿಲ್ಲವ ಅಭಿವೃದ್ಧಿ ಸಂಘದ ನಗರಾಧ್ಯಕ್ಷ ಗಣಪತಿ ನಾಯ್ಕ ದೇವಿಕೆರೆ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಸದಸ್ಯರಾದ ಅನಂತ ನಾಯ್ಕ, ಗಣಪತಿ ಎಲ್ ನಾಯ್ಕ, ಮಧುಕರ ಬಿಲ್ಲವ, ದತ್ತು ರಾವ್, ಅಪೂರ್ವ ನಾಯ್ಕ, ವಿವೇಕ ಪೂಜಾರಿ ಇದ್ದರು.