ಹೊಟೇಲ್, ಅಂಗಡಿ, ಟಾಕ್ಸಿ, ಹಸು ಸಾಕಾಣಿಕೆ, ಸಣ್ಣ ಕೈಗಾರಿಕೆ ಮಾಡುವ ಬ್ರಾಹ್ಮಣರಿಗಾಗಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸಾಲ ಯೋಜನೆ ಜಾರಿಗೆ ತಂದಿದೆ. ಸಾಲಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಆಸಕ್ತರಾಗಿರುವ ಬ್ರಾಹ್ಮಣರು `ವಿಪ್ರ ಸ್ವ-ಉದ್ಯಮ ನೇರ ಸಾಲ ಯೊಜನೆ’ಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರನ್ನು ಮುಖ್ಯ ವಾಹಿನಿಗೆ ತರುವುದಕ್ಕಾಗಿ ಸರ್ಕಾರ ಈ ಯೋಜನೆ ಅನುಷ್ಠಾನ ಮಾಡಿದೆ. ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೊಟೇಲ್ ಉದ್ಯಮ, ಕ್ಯಾಟರಿಂಗ್, ಅಂಗಡಿ, ಟೈಲರಿಂಗ್, ಟ್ಯಾಕ್ಸಿ, ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡಲಾಗುತ್ತದೆ. ಈ ನೇರ ಸಾಲ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದುಳಿದ ಬ್ರಾಹ್ಮಣ ಸಮುದಾಯವರು ಅರ್ಜಿ ಸಲ್ಲಿಸುವ ಅವಕಾಶವಿದೆ.
ಈ ಸಾಲ ಯೋಜನೆಯ ಅಡಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿಯಿದೆ. ದಿವ್ಯಾಂಗರಿಗೆ ಶೇ 5ರಷ್ಟು ಮೀಸಲಾತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಅಗಸ್ಟ 31 ಕೊನೆ ದಿನ. ಆ ದಿನ ಸಂಜೆ 5.30ರೊಳಗೆ ಬರುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
ಆನ್ಲೈನ್ ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ ಮಾಡಿ: ವಿಪ್ರ ಸ್ವ-ಉದ್ಯಮ ನೇರ ಸಾಲ ಯೊಜನೆ
ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಭೇಟಿ ನೀಡಿ:
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ನ್ಯೂ ಕೆ.ಎಚ್.ಬಿ. ಕಾಲೋನಿ. ಹಬ್ಬುವಾಡಾ, ಕಾರವಾರ.
ಅಥವಾ
ಇಲ್ಲಿ ಫೋನ್ ಮಾಡಿ :7975633671