‘ಕಾರವಾರದ ಅಸ್ನೋಟಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಸಂಸ್ಥೆಯ ಉಪಾಧ್ಯಕ್ಷ ಗಿರೀಶ್ ದೇಸಾಯಿ ಅವರು `ನಮಗೆಲ್ಲ ಸ್ವಾತಂತ್ರ್ಯ ಸಿಗಲು ಹಿರಿಯರು ಮಾಡಿದ ಹೋರಾಟವೇ ಕಾರಣ’ ಎಂದು ಹೇಳಿದ್ದಾರೆ.
`ನಮ್ಮ ಹಿರಿಯರು ನೀಡಿದ ತ್ಯಾಗದ ಫಲವಾಗಿ ಸ್ವಾತಂತ್ರ್ಯ ದೊರೆತಿದೆ. ಅದನ್ನು ಅರಿತು ವಿದ್ಯಾರ್ಥಿಗಳು ಶಿಸ್ತು, ಪ್ರಮಾಣಿಕತೆ ಹಾಗೂ ದೇಶ ಸೇವೆಯ ಮನೋಭಾವನದಿಂದ ಬದುಕಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಷ್ಟೇ ಮುಖ್ಯ’ ಎಂದವರು ಕರೆ ನೀಡಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಸಂಜಯ ಸಾಳುಂಕೆ ಅವರು `ಭಾರತ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ. ತಂತ್ರಜ್ಞಾನ, ವಿಜ್ಞಾನ, ಕ್ರೀಡೆ ಎಲ್ಲಾ ಕ್ಷೇತ್ರದಲ್ಲೂ ನಮ್ಮ ಯುವಕರು ಸಾಧನೆ ಮಾಡುತ್ತಿದ್ದಾರೆ. ಜಾತಿ, ಧರ್ಮ, ಭ್ರಷ್ಟಾಚಾರದಂತಹ ಸಮಸ್ಯೆಗಳನ್ನು ನಾವು ಎದುರಿಸುತ್ತಿದ್ದು, ಈ ಸವಾಲುಗಳನ್ನು ಹಿಂದಿಕ್ಕಿ ದೇಶವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ’ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರಾದ ಶಶಿಕಾಂತ ಸಾಳುಂಕೆ, ನ್ಯೂಮಾಡಲ್ ಇಂಗ್ಲಿಷ್ ಸ್ಕೂಲ ಅಸ್ನೋಟಿ ಮುಖ್ಯಾಧ್ಯಾಪಕಿಯರಾದ ಶೃತಿಕಾ ದೇಸಾಯಿ, ಜಯಲಕ್ಷ್ಮೀ ಬಾಂದೇಕರ, ಸವಿತಾ ನಾಯ್ಕ ಅವರು ಹಾಜರಿದ್ದರು. ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಗೌರವ ವಂದನೆ ಸಲ್ಲಿಸಿದರು. ದೈಹಿಕ ಶಿಕ್ಷಕ ಶರತ್ ಗಾಂವಕರ್ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಹ ಶಿಕ್ಷಕ ಸಂತೋಷ ಕಾಂಬಳೆ, ಶಿವಾಜಿ ವಿದ್ಯಾ ಮಂದಿರ ಮುಖ್ಯಾಧ್ಯಾಪಕ ಗಣೇಶ ಬಿಷ್ಟಣ್ಣನವರ ಅವರು ವಿವಿಧ ಜವಾಬ್ದಾರಿ ನಿಭಾಯಿಸಿದರು. ಈ ವೇದಿಕೆಯಲ್ಲಿ ದೇಶಭಕ್ತಿ ಗೀತೆ, ಭಾಷಣ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮ ನಡೆದವು. ಮಾಜಿ ಸೈನಿಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.