`ಮುಂಗಾರು ಮಳೆಯ ಅಭಾವದಿಂದ ಕೃಷಿ ಚಟುವಟಿಕೆಗಳು ಕ್ಷೀಣಿಸಿದ್ದು, ಇಂತಹ ಸಂದರ್ಭದಲ್ಲಿ ಜನರು ಅಂಗೈನಲ್ಲಿರುವ ಅವಕಾಶದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಆಗಸ್ಟ್ 15ರ ಒಳಗಾಗಿ ಜಿಲ್ಲೆಯ ಎಲ್ಲಾ 229 ಗ್ರಾಮ ಪಂಚಾಯತಿಗಳಲ್ಲಿ ಜನಜಾಗೃತಿ, ಹೆಚ್ಚುವರಿ ಕ್ರಿಯಾ ಯೋಜನೆ ತಯಾರಿ ಮತ್ತು ಕೂಲಿಕಾರರನ್ನು ಸಂಘಟಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ವಿಶೇಷ ಗ್ರಾಮ ಸಭೆ ಆಯೋಜಿಸಲಾಗಿದೆ.
`ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಗೊಳಪಡುವ ಜನರು ಈ ವಿಶೇಷ ಗ್ರಾಮ ಸಭೆಗಳಲ್ಲಿ ಭಾಗವಹಿಸಿ, ತಮಗೆ ಬೇಕಾದ ವೈಯಕ್ತಿಕ ಸೌಲಭ್ಯಗಳು, ಗ್ರಾಮಗಳಿಗೆ ಅವಶ್ಯವಿರುವ ಸಮುದಾಯ ಕಾಮಗಾರಿಗಳ ಪಟ್ಟಿಯೊಂದಿಗೆ ವಿಕಸಿತ ಗ್ರಾಮ ಪಂಚಾಯತ್ ಪ್ಲಾನ್ ತಯಾರಿಸಲು ಸಾರ್ವಜನಿಕರು ಕೈಜೋಡಿಸಬೇಕು’ ಎಂದು ಅಧಿಕಾರಿಗಳು ಕೋರಿದ್ದಾರೆ. ಈ ಹಿಂದೆ ಮನರೇಗಾ ಯೋಜನೆಯಡಿ ಕುಟುಂಬವೊAದಕ್ಕೆ 100 ದಿನಗಳಿಷ್ಟಿದ್ದ ಉದ್ಯೋಗ ಅವಕಾಶ ಈಗ ಹೊಸ ಯೋಜನೆಯಡಿ 125 ದಿನಗಳಿಗೆ ಹೆಚ್ಚಳವಾಗಿದೆ. ದಿನವೊಂದಕ್ಕೆ ಮೊದಲು ರೂ. 375 ರಷ್ಟಿದ್ದ ಕೂಲಿ ದರ ಇದೀಗ 382 ರೂ.ಗೆ ಹೆಚ್ಚಿಸಲಾಗಿದೆ. ಇದರಿಂದ ಜಾಬ್ ಕಾರ್ಡ್ ಹೊಂದಿರುವ ಒಂದು ಕುಟುಂಬ ವಾರ್ಷಿಕವಾಗಿ 47,750 ರೂ. ಆದಾಯ ಗಳಿಸಬಹುದಾಗಿದೆ. ಕೂಲಿ ಹಣವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಉದ್ಯೋಗ ಕೋರಿ ಪಾರ್ಮ್ ನಂ. 6ರಲ್ಲಿ ಅರ್ಜಿ ಸಲ್ಲಿಸಿದ 15 ದಿನದೊಳಗೆ ಕೆಲಸ ಒದಗಿಸಲಾಗುತ್ತದೆ. ಒಂದು ವೇಳೆ ಕೆಲಸ ಒದಗಿಸಲು ಸಾಧ್ಯವಾಗದಿದ್ದರೆ ನಿರುದ್ಯೋಗ ಭತ್ಯೆ ನೀಡಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಕೂಲಿ ಹಣ ಪಾವತಿಯಲ್ಲಿ ವಿಳಂಬವಾಗದoತೆ ಸಕಾಲದಲ್ಲಿ ಪಾವತಿಸಲು ಕ್ರಮ ವಹಿಸಲಾಗುವುದು. ಯೋಜನೆಯಲ್ಲಿ 318 ಕಾಮಗಾರಿಗಳಿಗೆ ಅವಕಾಶ ನೀಡಲಾಗಿದ್ದು, ಸರ್ಕಾರಿ ಶಾಲಾ ಕೊಠಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಬಸ್ ನಿಲ್ದಾಣ, ಗ್ರಾಮೀಣ ಉದ್ಯಾನ, ಗ್ರಂಥಾಲಯ ಸೇರಿದಂತೆ ಹೆಚ್ಚಿನ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ.
ಜಿಲ್ಲೆಯಲ್ಲಿ ಪ್ರಸ್ತುತ 4.38 ಲಕ್ಷ ಕೂಲಿಕಾರರನ್ನು ಒಳಗೊಂಡ 2.02 ಲಕ್ಷ ಜಾಬ್ ಕಾರ್ಡ್ ಗಳಿದ್ದು, ಅದರಲ್ಲಿ 1.24 ಲಕ್ಷದಷ್ಟ್ಟು ಸಕ್ರಿಯ ಕೂಲಿಕಾರರಿದ್ದಾರೆ. ಮನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವ ಎಲ್ಲರೂ ಎಂದಿನoತೆ ಕೆಲಸಕ್ಕೆ ಬೇಡಿಕೆ ಸಲ್ಲಿಸಿ, ಸ್ಥಳೀಯವಾಗಿ ಉದ್ಯೋಗ ಪಡೆಯಬಹುದಾಗಿದೆ. ಹೊಸದಾಗಿ ಉದ್ಯೋಗ ಚೀಟಿ ಬೇಕಾದರೆ ಗ್ರಾಮ ಪಂಚಾಯತಿಗೆ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಪ್ರತಿ ನೀಡಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ನೊಂದಾಯಿಸಿ, ಉಚಿತವಾಗಿ ಗ್ಯಾರಂಟಿ ಕಾರ್ಡ್ ಪಡೆಯಬಹುದಾಗಿದೆ. ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರೊಂದಿಗೆ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ, ಜೀವನೋಪಾಯ ಹಾಗೂ ಹವಾಮಾನ ವೈಪರೀತ್ಯ ಶಮನ ಕಾಮಗಾರಿಗಳ ಅನುಷ್ಠಾನಕ್ಕೆ ಯೋಜನೆಯಡಿ ಅವಕಾಶವಿದ್ದು, ಜಿಲ್ಲೆಯ ಭೌಗೋಳಿಕ ಪ್ರದೇಶದ ಅಗತ್ಯತೆ ಅನುಸಾರ ನೀರಿನ ಅಭಾವವನ್ನು ಸಮರ್ಥವಾಗಿ ನಿಭಾಯಿಸಲು ಚೆಕ್ ಡ್ಯಾಂ, ಕೆರೆ ಸಮಗ್ರ ಅಭಿವೃದ್ಧಿ, ಕಲ್ಯಾಣಿ ಪುನಶ್ಚೇತನ, ವೈಯಕ್ತಿಕ ಮತ್ತು ಸಮುದಾಯ ಕೊಳವೆಬಾವಿ ಮರುಪೂರಣ ಘಟಕ, ಕೃಷಿ ಬಾವಿ, ಕಾಂಟೂರು ಟ್ರೆಂಚ್ ಮತ್ತು ಮಳೆ ನೀರು ಕೊಯ್ಲು ಘಟಕ ನಿರ್ಮಾಣ ಸೇರಿದಂತೆ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಹೆಚ್ಚುವರಿ ಕ್ರಿಯಾ ಯೋಜನೆ ತಯಾರಿಸುವಾಗ ಹೆಚ್ಚಿನ ಆದ್ಯತೆ ನೀಡಲಾಗಿದೆ.
`ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಗ್ರಾಮೀಣ ಭಾಗದ ಜನರ ಜೀವನೋಪಾಯಕ್ಕಾಗಿ ಸಾಕಷ್ಟು ಅವಕಾಶಗಳಿದ್ದು, ಜಿಲ್ಲೆಯಲ್ಲಿ ಯೋಜನೆಯ ಸಮಗ್ರ ಅನುಷ್ಟಾನಕ್ಕಾಗಿ ಸಂಬoಧಪಟ್ಟ ಅಧಿಕಾರಿ ಸಿಬ್ಬಂದಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಜಿಲ್ಲೆಯ ಜನತೆ ಈ ಹೊಸ ಯೋಜನೆಯ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಹೇಳಿದ್ದಾರೆ.