ತಮಗಿರುವ ಅಧಿಕಾರವನ್ನು ಸಂಪೂರ್ಣವಾಗಿ ಬಳಸಿಕೊಂಡ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಅವರು ಜಿಲ್ಲೆಯಾದ್ಯಂತ ಡಿಜೆ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಪ್ರಭಾವಿಗಳ ಒತ್ತಡ, ಪರ-ವಿರೋಧ ಚರ್ಚೆ, ಆಕ್ಷೇಪಣೆ ಹಾಗೂ ಅಹವಾಲು ಸಲ್ಲಿಕೆಗಳ ನಡುವೆಯೂ ಅವರು ಈ ಆದೇಶ ಮಾಡಿದ್ದಾರೆ.
`ವಸತಿ ಪ್ರದೇಶ, ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶಗಳಲ್ಲಿ ದೊಡ್ಡ ಶಬ್ದಗಳನ್ನು ಮಾಡುವ ಹಾಗಿಲ್ಲ. ರಸ್ತೆಯ ಇಳಿಜಾರು ಪ್ರದೇಶ, ಸಂಚಾರ ದಟ್ಟಣೆಯ ಪ್ರದೇಶ ಸಮುದಾಯ ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿ 10 ಗಂಟೆಯಿoದ ಬೆಳಗ್ಗೆ 6 ಗಂಟೆಯವರೆಗೆ ಶಬ್ದ ದೊಡ್ಡ ಧ್ವನಿವರ್ಧಕಗಳನ್ನು ಬಳಸುವ ಹಾಗಿಲ್ಲ’ ಎಂದವರು ಸೂಚಿಸಿದ್ದಾರೆ. ಡಿಜೆ ಬಳಕೆಯಿಂದ ವ್ಯಾಪಕ ಪ್ರಮಾಣದಲ್ಲಿ ಶಬ್ದ ಮಾಲಿನ್ಯ ಆಗುವುದನ್ನು ಅರಿತು ಜಿಲ್ಲಾಧಿಕಾರಿಗಳು ಈ ನಿರ್ಣಯ ಮಾಡಿದ್ದಾರೆ. ಶಬ್ದ ಮಾಲಿನ್ಯ ನಿಯಂತ್ರಣ ಮತ್ತು ನಿಯಮ ನಿಯಮಗಳು 2000ರನ್ವಯ ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ಕಲಂ 163ರಡಿ ಡೀಸಿಗೆ ನೀಡಲಾದ ಅಧಿಕಾರದ ಮೇರೆಗೆ ಅವರು ಈ ಆದೇಶ ಹೊರಡಿಸಿದ್ದಾರೆ.
`ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ಡಿಜೆ ಬಳಕೆ ಮಾಡುವ ಹಾಗಿಲ್ಲ’ ಎಂದವರು ಸೂಚಿಸಿದ್ದಾರೆ. ಅದರೊಂದಿಗೆ ಬೇಸ್ ಬೂಸ್ಟರ್ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್ ಮೀರಿದ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಸಹ ಅವರು ಸಂಪೂರ್ಣವಾಗಿ ನಿಷೇಧಿಸಿದ್ದಾರೆ. ಇನ್ನೂ, ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯನ್ನು ಆಯೋಜಿಸುವವರು ಅತೀ ಅವಶ್ಯವಿದ್ದಲ್ಲಿ ಪೂರ್ವ ಲಿಖಿತ ಷರತ್ತುಬದ್ಧ ಮಿತ ಶಬ್ದ ವ್ಯವಸ್ಥೆಗಳಿಗೆ ಮಾತ್ರ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇಂಥ ಸನ್ನಿವೇಶದಲ್ಲಿ ಶಬ್ದ ನಿಯಮಗಳ ಪಾಲನೆಗೆ ಸಂಬoಧಿಸಿದoತೆ ಲಿಖಿತ ಮುಚ್ಚಳಿಕೆ ಪತ್ರ ನೀಡಬೇಕು. ಈ ಆದೇಶದ ಉಲ್ಲಂಘನೆ ಸಂಭವಿಸಿದ್ದಲ್ಲಿ ಆಯೋಜಕರು ವೈಯಕ್ತಿಕವಾಗಿ ಹೊಣೆಗಾರರಾರನ್ನಾಗಿ ಮಾಡಲಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.
Advertisement. Scroll to continue reading.