ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡೆ ಸೆಪ್ಟೆಂಬರ್ 12ರಂದು `ಪ್ರಜಾ ಸೇವೆ’ ಆಂದೋಲನ ನಡೆಯಲಿದೆ. ಆ ದಿನ ಬೆಳಗ್ಗೆ 10ಗಂಟೆಗೆ ಸಿದ್ದಾಪುರ, ಕುಮಟಾ, ಕಾರವಾರ, ಹೊನ್ನಾವರ ಮುಂಡಗೋಡು ಹಾಗೂ ಜೊಯಿಡಾದಲ್ಲಿ ಏಕಕಾಲಕ್ಕೆ ಜನರ ಅಹವಾಲು ಆಲಿಸಲು ನಿರ್ಧರಿಸಲಾಗಿದೆ.
ಸಿದ್ದಾಪುರ ತಾಲೂಕು ಕೋಡ್ಕಣಿ ಹೋಬಳಿಯ ಹಲಗೇರಿ ಗ್ರಾಮದ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ. ಕುಮಟಾ ತಾಲೂಕಿನ ಗೋಕರ್ಣ ಹೋಬಳಿಯ ತೊರ್ಕೆ ಗ್ರಾಮದ ನಾಡವರ ಸಭಾಭವನದಲ್ಲಿ ಕುಮಟಾ-ಹೊನ್ನಾವರ ಶಾಸಕ ದಿನಕರ ಕೆ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಹೊನ್ನಾವರ ತಾಲೂಕು ಮಂಕಿ ಹೋಬಳಿಯ ಕುಂಬಾರಕೇರಿಯ ಶ್ರೀ ಕೊಕ್ಕೇಶ್ವರ ಶಂಭುಲಿ0ಗ ದೇವಸ್ಥಾನ ಸಭಾಭವನದಲ್ಲಿ ವಿಧಾನಸಭೆಯ ಉಪಾಧ್ಯಕ್ಷರು ಹಾಗೂ ಭಟ್ಕಳ-ಹೊನ್ನಾವರ ಶಾಸಕ ಮಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.
ಕಾರವಾರ ತಾಲೂಕು ಘಾಡಸಾಯಿ ಹೋಬಳಿಯ ಮಲ್ಲಾಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕರ್ನಾಟಕ ಮಾರ್ಕೆಟಿಂಗ್, ಕಮ್ಯೂನಿಕೇಶನ್ ಮತ್ತು ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷರು ಹಾಗೂ ಕಾರವಾರ-ಅಂಕೋಲಾ ಶಾಸಕ ಸತೀಶ್ ಕೃಷ್ಣ ಸೈಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಮುಂಡಗೋಡ ತಾಲೂಕು ಪಾಳಾ ಹೋಬಳಿಯ ಅಂಬೇಡ್ಕರ್ ಭವನದಲ್ಲಿ ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಜೋಯಿಡಾ ತಾಲ್ಲೂಕು ಕುಂಬಾರವಾಡಾ ಹೋಬಳಿಯ ಕಾತೇಲಿ ಗ್ರಾಮದ ಕ್ಷೇತ್ರಪಾಲ ಸಭಾಭವನದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಹಳಿಯಾಳ-ದಾಂಡೇಲಿ-ಜೋಯಿಡಾ ಶಾಸಕ ಆರ್ ವಿ ದೇಶಪಾಂಡೆ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಸಭೆ ಜರುಗಲಿದೆ.
Advertisement. Scroll to continue reading.
ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಹಾಗೂ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಅವರು ತಿಳಿಸಿದ್ದಾರೆ.