ಜಿಲ್ಲಾಕೇಂದ್ರ ಕಾರವಾರದಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನ ಮುಗಿಸಿದ್ದು, ಗುರುವಾರ ಶಿರಸಿಯ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಮುಖ್ಯ ಭಾಷಣ ಮಾಡಿದ್ದಾರೆ. `ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು’ ಎಂದವರು ಆಗ್ರಹಿಸಿದ್ದರೆ.
`ಚಂದ್ರಶೇಖರನ್ ಎನ್ನುವ ಅಧಿಕಾರಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಳ್ಳುವ ಪೂರ್ವದಲ್ಲಿ ಆರು ಪುಟಗಳ ಡೆತ್ ನೋಟ್ ಬರದಿಟ್ಟಿದ್ದು, ಅದರಲ್ಲಿ ನಾಗೇಂದ್ರ ಅವರ ಭ್ರಷ್ಟಾಚಾರದ ವಿವರಗಳಿವೆ. ಯಾವ ಯಾವ ಖಾತೆಗೆ ಹಣ ಹೋಗಿದೆ? ಎಂಬ ಮಾಹಿತಿಯೂ ಅದರಲ್ಲಿದೆ. ಭ್ರಷ್ಟಾಚಾರ ಮಾಡಿಯೇ ಅಧಿಕಾರಕ್ಕೆ ಬಂದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ಯೋಗ್ಯರಲ್ಲ. ಸದ್ಯ ವಾಲ್ಮೀಕಿ ಹಗರಣದಲ್ಲಿಯೂ ಅವರು ಆರೋಪಿಯಾಗಿದ್ದರಿಂದ ಸರ್ಕಾರ ತಕ್ಷಣ ರಾಜೀನಾಮೆ ಪಡೆಯಬೇಕು’ ಎಂದು ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ, ಸಚಿವ ನಾಗೇಂದ್ರ ಅವರನ್ನು ಸಂಪುಟದಿoದ ವಜಾಗೊಳಿಸಬೇಕೆಂದು ಆಗ್ರಹಿಸಿ ಶಿರಸಿ ಸಿದ್ಧಾಪುರ ಕ್ಷೇತ್ರದ ಕಾರ್ಯಕರ್ತರು ಪಟ್ಟುಹಿಡಿದರು. ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ ಜಿ ನಾಯ್ಕ ಮಾತನಾಡಿ `ಭ್ರಷ್ಟಾಚಾರಕ್ಕೆ ಕಾರಣವಾದ ನಾಗೇಂದ್ರ ಅವರನ್ನು ತಕ್ಷಣ ಸಂಪುಟದಿoದ ವಜಾ ಮಾಡಬೇಕು’ ಎಂದು ಒತ್ತಾಯಿಸಿದರು.
ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರು ಎಸಳೆ, ಶಿರಸಿ ನಗರ ಮಂಡಲ ಅಧ್ಯಕ್ಷರಾದ ಆನಂದ ಸಾಲೇರ, ಶಿರಸಿ ಬಿಜೆಪಿ ಗ್ರಾಮೀಣ ಅಧ್ಯಕ್ಷರಾದ ಉಷಾ ಹೆಗಡೆ, ಸಿದ್ದಾಪುರ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ ಕೆ,ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಾಯ್ಸನ್ ಡಿಸೋಜಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯಕ, ಬಿಜೆಪಿ ಪ್ರಮುಖರಾದ ರಾಜು ಭಂಡಾರಿ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ಕಾರವಾರ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ರೈತ ಮೋರ್ಚಾ ಉಪಾಧ್ಯಕ್ಷ ಸುರೇಶ ನಾಯ್ಕ, ರೈತ ಮೋರ್ಚ ಉಪಾಧ್ಯಕ್ಷ ಬಸಣ್ಣ ಕುರುಬಕಟ್ಟಿ, ಯಲ್ಲಾಪುರ ರೈತ ಮೋರ್ಚಾ ಅಧ್ಯಕ್ಷ ರಾಮಣ್ಣ ಚಿಕ್ಯಾನ ಮನೆ, ಮತ್ತು ಶಿರಸಿ ಸಿದ್ದಾಪುರ, ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.