ಟಿಬೇಟಿಯನ್ ಕಾಲೋನಿಯಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಮೇಲಿನಿಂದ ಕೆಳಗೆ ಬಿದ್ದು ಸಾವನಪ್ಪಿದ್ದಾರೆ. ಕೆಲಸ ಮಾಡುವ ಕಾರ್ಮಿಕರಿಗೆ ಸುರಕ್ಷತೆ ಒದಗಿಸದಿರುವುದೇ ಅವಘಡಕ್ಕೆ ಕಾರಣ ಎಂಬ ಆರೋಪವ್ಯಕ್ತವಾಗಿದೆ.
ಮುಂಡಗೋಡಿನ ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ 1ರಲ್ಲಿ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ. ನಾಲ್ಕು ಅಂತಸ್ಥಿನ ಕಟ್ಟಡ ಕಟ್ಟಲು ಅನೇಕ ಕಾರ್ಮಿಕರು ದುಡಿಯುತ್ತಿದ್ದಾರೆ. ಬಸಾಪುರದದ ಸಂದೇಶ ನಾಗರಾಜ ಚಲವಾದಿ (26) ಅವರು ಮುಂಡಗೋಡ ತಾಲೂಕಿನ ಇಂದಿರಾನಗರ ಕೊಪ್ಪದಲ್ಲಿ ವಾಸವಾಗಿದ್ದು, ಅವರು ಈ ಕಟ್ಟಡ ನಿರ್ಮಾಣಕ್ಕೆ ಶ್ರಮಿಸುತ್ತಿದ್ದರು. ಶನಿವಾರ ಕಟ್ಟಡದ ಮೇಲ್ಬಾಗದಿಂದ ಆಕಸ್ಮಿಕವಾಗಿ ಅವರು ಕೆಳಗೆ ಬಿದ್ದು ಸಾವನಪ್ಪಿದ್ದಾರೆ.
ಕೆಲ ದಿನಗಳ ಹಿಂದೆಯೇ ಟಿಬೆಟಿ ಕಾಲೋನಿಯಲ್ಲಿ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕರೊಬ್ಬರು ಸಾವನಪ್ಪಿದ್ದರು. ಸದ್ಯ ಸಂತೋಷ ಅವರ ಸಾವು ಎರಡನೇ ಪ್ರಕರಣವಾಗಿದ್ದು, ಅಲ್ಲಿ ಕಟ್ಟಡ ಕಾರ್ಮಿಕರಿಗೆ ಸುರಕ್ಷತೆ ಇಲ್ಲ ಎಂದು ಜನ ದೂರಿದ್ದಾರೆ. ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಕಾರ್ಮಿಕರಿಗೆ ಸೇಫ್ಟಿ ಬೆಲ್ಟ್, ಹೆಲ್ಮಟ್, ಸುರಕ್ಷತಾ ಜಾಲ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸುವುದು ಅತ್ಯಗತ್ಯ ಎಂದು ಅಲ್ಲಿನವರು ಹೇಳಿದ್ದಾರೆ.
`ಕಾರ್ಮಿಕರೇ.. ಸುರಕ್ಷತೆ ಬಗ್ಗೆ ಗಮನಹರಿಸಿ’