`ಅoಕೋಲಾದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ ಖಂಡನೀಯ’ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಹೇಳಿದ್ದಾರೆ. `ಇಂಥ ಮೆರವಣಿಗೆಗಳ ಸಂಪೂರ್ಣ ಹೊಣೆಗಾರಿಕೆಯನ್ನು ಆಯೋಜಕರೇವಹಿಸಬೇಕು’ ಎಂದವರು ಆಗ್ರಹಿಸಿದ್ದಾರೆ.
`ಧಾರ್ಮಿಕ ಮೆರವಣಿಗೆಗಳು ಯಾವುದೇ ಧರ್ಮ ಅಥವಾ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗಿಲ್ಲ. ಆ ಮೆರವಣಿಗೆಗಳು ಶಾಂತಿ, ಸೌಹಾರ್ದತೆ ಹಾಗೂ ಕಾನೂನು-ಸುವ್ಯವಸ್ಥೆಯನ್ನು ಕಾಪಾಡುವ ರೀತಿಯಲ್ಲಿ ನಡೆಯಬೇಕು’ ಎಂದವರು ಹೇಳಿದ್ದಾರೆ. `ಮೆರವಣಿಗೆಯ ಉದ್ದೇಶಕ್ಕೆ ಸಂಬAಧಿಸದ ವಿದೇಶಿ ರಾಷ್ಟ್ರಗಳ ಧ್ವಜಗಳು ಅಥವಾ ವಿವಾದಕ್ಕೆ ಕಾರಣವಾಗಬಹುದಾದ ಯಾವುದೇ ರೀತಿಯ ಪ್ರದರ್ಶನಗಳಿಗೆ ಇಲ್ಲಿ ಅವಕಾಶವಿಲ್ಲ’ ಎಂದಿದ್ದಾರೆ. `ಮೆರವಣಿಗೆಯ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆಯುವುದರಿಂದ ಅನಗತ್ಯ ಗೊಂದಲ ಉಂಟಾಗಲಿದೆ. ಜೊತೆಗೆ ಸಾರ್ವಜನಿಕರಲ್ಲಿ ಆತಂಕ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಯಾವುದೇ ಧಾರ್ಮಿಕ ಮೆರವಣಿಗೆ ಆಯೋಜಿಸುವಾಗ ಸಂಬAಧಪಟ್ಟ ಸಮಾಜದ ಮುಖಂಡರು, ಸಂಘಟಕರು ಹಾಗೂ ಮೆರವಣಿಗೆಯ ನೇತೃತ್ವವಹಿಸುವವರು ಮೆರವಣಿಗೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು’ ಎಂದು ಮಾಧವ ನಾಯಕ ಅವರು ಆಗ್ರಹಿಸಿದ್ದಾರೆ.
`ಮೆರವಣಿಗೆಗೆ ಮುನ್ನ ಅದರ ಮಾರ್ಗ, ಸಮಯ, ಕಾರ್ಯಕ್ರಮದ ರೂಪುರೇಷೆ, ಭಾಗವಹಿಸುವ ಸಂಘಟನೆಗಳು ಹಾಗೂ ಜವಾಬ್ದಾರಿವಹಿಸುವ ಮುಖಂಡರ ವಿವರಗಳನ್ನು ಪೊಲೀಸ್ ಠಾಣೆಗೆ ಕಡ್ಡಾಯವಾಗಿ ತಿಳಿಸುವ ವ್ಯವಸ್ಥೆ ಜಾರಿಗೊಳಿಸಬೇಕು. ಮೆರವಣಿಗೆಯಲ್ಲಿ ಯಾವುದೇ ಪ್ರಚೋದನಕಾರಿ ಘೋಷಣೆಗಳು, ಬ್ಯಾನರ್ಗಳು, ಧ್ವಜಗಳು ಅಥವಾ ಸಾರ್ವಜನಿಕ ಶಾಂತಿಗೆ ಧಕ್ಕೆ ತರುವಂತಹ ಚಟುವಟಿಕೆಗಳು ನಡೆಯದಂತೆ ಆಯೋಜಕರು ಮತ್ತು ಮುಖಂಡರು ಮುಂಚಿತವಾಗಿಯೇ ಕ್ರಮ ಕೈಗೊಳ್ಳಬೇಕು’ ಎಂದು ಅವರು ಮನವಿ ಮಾಡಿದ್ದಾರೆ. `ಅಂಕೋಲಾದಲ್ಲಿ ನಡೆದ ಘಟನೆಯಲ್ಲಿ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಪ್ಯಾಲೆಸ್ಟೈನ್ ಧ್ವಜವನ್ನು ವಶಕ್ಕೆಪಡೆದು ಪರಿಸ್ಥಿತಿಯನ್ನು ನಿಯಂತ್ರಿಸಿರುವುದು ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸಿ, ಅವುಗಳನ್ನು ಎಲ್ಲಾ ಮೆರವಣಿಗೆಗಳ ಆಯೋಜಕರಿಗೆ ಕಡ್ಡಾಯವಾಗಿ ತಿಳಿಸಬೇಕು’ ಎಂದವರು ಆಗ್ರಹಿಸಿದ್ದಾರೆ.
ಜೊತೆಗೆ `ಕಾನೂನು ಉಲ್ಲಂಘನೆಯಾಗುವ ಸಂದರ್ಭದಲ್ಲಿ ಮೆರವಣಿಗೆಯ ಆಯೋಜಕರು ಹಾಗೂ ಜವಾಬ್ದಾರಿವಹಿಸಿರುವ ಮುಖಂಡರ ಮೇಲೂ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮಾಧವ ನಾಯಕ ಒತ್ತಾಯಿಸಿದ್ದಾರೆ. `ಧಾರ್ಮಿಕ ಸ್ವಾತಂತ್ರ್ಯವನ್ನು ಗೌರವಿಸುವುದರ ಜೊತೆಗೆ ದೇಶದ ಕಾನೂನು, ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಯನ್ನು ಪ್ರತಿಯೊಬ್ಬರೂ ಕಾಪಾಡುವುದು ಅಗತ್ಯ. ಅಂಕೋಲಾ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸಮುದಾಯಗಳ ನಡುವೆ ಶಾಂತಿ ಮತ್ತು ಸಹಬಾಳ್ವೆ ಮುಂದುವರಿಯಬೇಕು’ ಎಂದವರು ಹೇಳಿದ್ದಾರೆ.