`ಡಿಸೆಂಬರ್ 11ರಂದು ಕೈಗಾ ಅಣು ವಿದ್ಯುತ್ ಘಟಕದಲ್ಲಿ ತುರ್ತು ಸನ್ನಿವೇಶದ ಅಣಕು ಕಾರ್ಯಾಚರಣೆ ನಡೆಯಲಿದ್ದು, ಎಲ್ಲಾ ಇಲಾಖೆಯವರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಡೀಸಿ ಕೆ ಲಕ್ಷ್ಮೀಪ್ರಿಯಾ ಸೂಚಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಅವರು `ದೈನಂದಿನ ಸಾರ್ವಜನಿಕ ವ್ಯವಸ್ಥೆಗೆ ಯಾವುದೇ ಅಡಚಣೆಯಾಗದಂತೆ ಅಣಕು ಕಾರ್ಯಾಚರಣೆ ನಡೆಸಬೇಕು’ ಎಂದು ಹೇಳಿದ್ದಾರೆ.
Advertisement. Scroll to continue reading.
`ಆರೋಗ್ಯ ಇಲಾಖೆ ,ಕಂದಾಯ ಇಲಾಖೆ, ಅಗ್ನಿಶಾಮಕ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ತಮಗೆವಹಿಸಲಾದ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕು. ಕಾರ್ಯಚರಣೆಗೆ ಅಗತ್ಯವಿರುವ ವಾಹನಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆಯವರು ಮಾಡಬೇಕು. ಪೊಲೀಸ್ ಇಲಾಖೆವತಿಯಿಂದ ಕಾಯಾಚರಣೆ ನಡೆಯುವ ವ್ಯಾಪ್ತಿಯ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅಣಕು ಕಾರ್ಯಚರಣೆಯಾದರೂ ಅಂತಿಮದಲ್ಲಿ ಕಾರ್ಯಚರಣೆಯ ಎಲ್ಲಾ ಹಂತದ ಕುರಿತು ಪರಾಮರ್ಶೆ ನಡೆಯಲಿದ್ದು, ಯಾವುದೇ ಹಂತದಲ್ಲಿ ಲೋಪಗಳು ಸಂಭವಿಸದAತೆ ಎಚ್ಚರವಹಿಸಬೇಕು’ ಎಂದು ಸೂಚಿಸಿದರು.
`ವಿಪತ್ತು ಸಂಭವಿಸಿದಾಗ ನೈಜ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತ್ವರಿತವಾಗಿ ನಿಗಧಿತ ಸಮಯದಲ್ಲಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ, ಉಪವಿಭಾಗಾಧಿಕಾರಿ ಶ್ರವಣ ಕುಮಾರ್, ಡಿಎಫ್ಓ. ರವಿಶಂಕರ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಕೈಗಾದ ಹಿರಿಯ ಅಧಿಕಾರಿಗಳಾದ ಅಮೋಲ್ ಶುಕ್ಲಾ, ಚಿತ್ತರಂಜನ್ ಇತರರಿದ್ದರು.