ಯಲ್ಲಾಪುರದ ರಾಮನಗರದ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿದ್ದ ರಂಜಿತಾ ಬನಸೋಡೆ ಅವರ ಹತ್ಯೆಯನ್ನು ಅನೇಕರು ಖಂಡಿಸಿದ್ದಾರೆ.
ADVERTISEMENT
ಶಿವರಾಮ ಹೆಬ್ಬಾರ್
ಶಾಸಕ ಶಿವರಾಮ ಹೆಬ್ಬಾರ್ ಅವರು ಇದೇ ವಿಷಯವಾಗಿ ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರ ಜೊತೆ ಸಭೆ ನಡೆಸಿದ್ದಾರೆ. `ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ರಂಜಿತಾ ಬನಸೋಡೆ ಅವರ ಭೀಕರ ಹತ್ಯೆ ನಡೆದಿರುವುದು ಅತ್ಯಂತ ಖಂಡನೀಯ’ ಎಂದು ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. `ಈ ವಿದ್ಯಮಾನ ನಾಗರಿಕ ಸಮಾಜ ತಲೆತಗ್ಗಿಸುವಂತಹ ಅಮಾನವೀಯ ಕೃತ್ಯವಾಗಿದೆ’ ಎಂದವರು ಆಕ್ರೋಶವ್ಯಕ್ತಪಡಿಸಿದ್ದಾರೆ. `ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು’ ಎಂದವರು ಸೂಚಿಸಿದ್ದಾರೆ. `ಯಾವುದೇ ರಾಜಿ, ವಿಳಂಬ ಅಥವಾ ಸಡಿಲಿಕೆಸಹಿಸಿಕೊಳ್ಳುವುದಿಲ್ಲ’ ಎಂದು ಅವರು ಎಚ್ಚರಿಸಿದ್ದಾರೆ. `ಯಲ್ಲಾಪುರದ ಸಾರ್ವಜನಿಕರು ಶಾಂತಿ ಮತ್ತು ಸಂಯಮವನ್ನು ಕಾಪಾಡಿಕೊಳ್ಳಬೇಕು. ಪೊಲೀಸ್ ಇಲಾಖೆ ಈಗಾಗಲೇ ಆರೋಪಿಯನ್ನು ಬಂಧಿಸುವ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದು, ಯಾರೂ ಭಯಪಡುವ ಅಗತ್ಯವಿಲ್ಲ’ ಎಂದು ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಕೈಸರ್ ಸಯ್ಯದ್ ಅಲಿ
ಪಟ್ಟಣ ಪಂಚಾಯತ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾ ಸಮಿತಿ ಸದಸ್ಯ ಕೈಸರ್ ಸಯ್ಯದ್ ಅಲಿ ಅವರು ಈ ವಿದ್ಯಮಾನವನ್ನು ತೀವೃವಾಗಿ ಖಂಡಿಸಿದ್ದಾರೆ. `ಕೊಲೆ ಆರೋಪಿಯನ್ನು ಕೂಡಲೇ ಬಂಧಿಸಬೇಕು. ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ಗರಿಷ್ಠ ಪರಿಹಾರ ಕೊಡಬೇಕು. ಸಮಾಜದಲ್ಲಿ ಇಂಥ ಕೆಲಸ ಆಗುವುದನ್ನು ತಡೆಯಲು ಕಟ್ಟುನಿಟ್ಟಿನ ನಿಯಮಗಳು ಬರಬೇಕು’ ಎಂದು ಕೈಸರ್ ಸಯ್ಯದ್ ಅಲಿ ಅವರು ಹೇಳಿದ್ದಾರೆ.
ADVERTISEMENT
ಅನಂತಮೂರ್ತಿ ಹೆಗಡೆ
ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಅವರು ಯಲ್ಲಾಪುರದ ಮಹಿಳೆಯ ಕೊಲೆಯ ಬಗ್ಗೆ ವಿಷಾಧವ್ಯಕ್ತಪಡಿಸಿದ್ದಾರೆ. `ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಲೇ ಮತಾಂಧರು ಈ ರೀತಿ ಮುಂದುವರೆದಿದ್ದಾರೆ. ಪೊಲೀಸರು ಆರೋಪಿಯನ್ನು ತಕ್ಷಣ ಬಂಧಿಸಿ ಗಲ್ಲಿಗೇರಿಸಬೇಕು. ಈ ಸರ್ಕಾರದಲ್ಲಿ ಜನಸಾಮಾನ್ಯರಿಗೆ ರಕ್ಷಣೆಯೇ ಇಲ್ಲ’ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.
ವಿಶ್ವೇಶ್ವರ ಹೆಗಡೆ ಕಾಗೇರಿ
`ದಲಿತ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ವಿಷಯ ಕೇಳಿ ಆಘಾತವಾಗಿದೆ. ಇಂಥ ಘಟನೆ ಮರುಕಳಿಸದ ಹಾಗೇ ತಡೆಯುವುದು ಅನಿವಾರ್ಯ. ಪೊಲೀಸರು ಈ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. `ಆರೋಪಿ ಬಂಧನ ಆಗುವವರೆಗೂ ಶವ ಸಂಸ್ಕಾರ ನಡೆಯಬಾರದು. ಮಹಿಳೆ ಮೇಲಿನ ದೌರ್ಜನ್ಯವನ್ನು ಎಲ್ಲರೂ ಖಂಡಿಸಬೇಕು’ ಎಂದು ಹಿಂದು ಸಂಘಟನೆ ಪ್ರಮುಖ ಪ್ರಮೋದ ಮುತಾಲಿಕ್ ಹೇಳಿದ್ದಾರೆ.