`ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲ ಮಳೆ ಮಾಪಕ ಹಾಗೂ ಹವಾಮಾನ ಮಾಪಕ ಕೇಂದ್ರಗಳ ಬಗ್ಗೆ ನಿರಂತರ ತಪಾಸಣೆ ನಡೆಸಬೇಕು’ ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದ್ದಾರೆ.
ಮಾಪನ ಕೇಂದ್ರಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆ ಕುರಿತ ಸಭೆ ನಡೆಸಿದ ಅವರು `ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ 39 ಟೆಲಿಮೆಟ್ರಿಕ್ ಹವಾಮಾನ ಮಾಪನ ಕೇಂದ್ರಗಳಿವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 253 ಟೆಲಿಮೆಟ್ರಿಕ್ ಮಳೆಮಾಪಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅವುಗಳಿಂದ ಮಳೆ, ತಾಪಮಾನ, ಆದ್ರ್ರತೆ, ಗಾಳಿಯ ವೇಗ ಮತ್ತು ದಿಕ್ಕುಗಳಿಗೆ ಸಂಬoಧಿಸಿದ ಮಾಹಿತಿಯೂ ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ ಹಾಗೂ ವಿಪತ್ತು ನಿರ್ವಹಣೆಗೆ ಅತ್ಯಂತ ಅಗತ್ಯವಾಗಿದೆ. ಹೀಗಾಗಿ ಅವುಗಳ ಮೇಲ್ವಿಚಾರಣೆ ಸರಿಯಾಗಿರಬೇಕು’ ಎಂದು ಸೂಚಿಸಿದ್ದಾರೆ.
`ಈ ಯಂತ್ರಗಳ ಕಾರ್ಯನಿರ್ವಹಣೆಯಲ್ಲಿ ದೋಷ ಕಂಡುಬAದಲ್ಲಿ ತಕ್ಷಣವೇ ವರದಿ ಸಲ್ಲಿಸಬೇಕು. ಸೂಚಿಸಿದ ಏಜೆನ್ಸಿಗಳ ಮೂಲಕ ದುರಸ್ತಿ ಕಾರ್ಯ ಕೈಗೊಳ್ಳಬೇಕು. ತಹಶೀಲ್ದಾರರು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಸಂಪೂರ್ಣವಾಗಿ ಅರಿತು ಕೆಲಸ ಮಾಡಬೇಕು. ಪ್ರತಿ ಗ್ರಾಮ ಆಡಳಿತಾಧಿಕಾರಿಗಳುತಮ್ಮ ವ್ಯಾಪ್ತಿಯ ಟೆಲಿಮೆಟ್ರಿಕ್ ಮಳೆಮಾಪಕ ಕೇಂದ್ರಗಳ ದಿನನಿತ್ಯದ ಮೇಲ್ವಿಚಾರಣೆ ಮಾಡಲು ಜವಾಬ್ದಾರರಾಗಿದ್ದಾರೆ’ ಎಂದರು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಪ್ರತಿವಾರ ಕನಿಷ್ಠ 10 ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳಿಗೆ ಭೇಟಿ ನೀಡಿ, ಅವುಗಳ ಕಾರ್ಯನಿರ್ವಹಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಬೇಕು’ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವ ಪ್ರಸಾದ್ ಗಾಂವಕರ್, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಸತೀಶ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಮತ್ತು ಗ್ರಾಮ ಆಡಳಿತಾಧಿಕಾರಿಗಳು ಈ ಸಭೆಯಲ್ಲಿದ್ದರು.