ಕಾರವಾರದ ರೀಶೆಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚಿರಾಗ ಕೋಠಾರಕರ್ ಅವರಿಗೆ ಜಾಮೀನು ಮಂಜೂರಾಗಿಲ್ಲ. ಹೀಗಾಗಿ ಅವರು ಇನ್ನಷ್ಟು ದಿನ ಜೈಲಿನಲ್ಲಿಯೇ ಕಾಲ ಕಳೆಯುವುದು ಅನಿವಾರ್ಯವಾಗಿದೆ.
ಜನವರಿ 9ರಂದು ರಿಶೆಲ್ ಕ್ರಿಸ್ತೋದ್ ಡಿಸೋಜಾ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆ ನಂತರ ಅವರ ಕುಟುಂಬದವರು ಅತ್ಯಾಚಾರದ ಆರೋಪ ಮಾಡಿದ್ದರು. ಜಿ ಪಂ ಮಾಜಿ ಸದಸ್ಯೆ ಚೈತ್ರಾ ಕೋಠಾರಕರ್ ಅವರ ಪುತ್ರ ಚಿರಾಗ ಕೋಠಾರಕರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಚಿರಾಗ ಕೋಠಾರಕರ್ ಅವರು ತಲೆಮರೆಸಿಕೊಂಡಿದ್ದರು. ಅನೇಕ ದಿನದ ಕಾರ್ಯಾಚರಣೆ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಚನೈಯಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಆಶ್ರಯ ನೀಡಿದ ಇಬ್ಬರ ವಿರುದ್ಧವೂ ಕಾನೂನು ಕ್ರಮ ಜರುಗಿಸಿದ್ದರು. ಅದಾದ ನಂತರ ಚಿರಾಗ ಕೋಠಾರಕರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದರೂ ನ್ಯಾಯಾಲಯ ಅದಕ್ಕೆ ಸಮ್ಮತಿ ನೀಡಲಿಲ್ಲ. ಸದ್ಯ ಮತ್ತೊಮ್ಮೆ ಜಾಮೀನಿಗಾಗಿ ಅರ್ಜಿ ಕೋರಲಾಗಿದ್ದು, ಅದನ್ನು ಕೋರ್ಟ ನಿರಾಕರಿಸಿದೆ. ಫೆ 10ರವರೆಗೂ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು, ಈ ದಇನ ಮತ್ತೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಈ ಪ್ರಕರಣದಲ್ಲಿ ಚಿರಾಗ್ ಹಾಗೂ ರಿಶೆಲ್ ಮೊಬೈಲ್ಗಳ ಎಫ್ಎಸ್ಎಲ್ ರಿಪೋರ್ಟ್ ಬರಲು ಬಾಕಿಯಿದೆ. ಇನ್ನು ರಿಶೆಲ್ ಮನೆಯವರು ಮಾಡಿರುವ ಅತ್ಯಾಚಾರ ಹಿನ್ನಲೆ ಮರು ಮರಣೋತ್ತರ ಪರೀಕ್ಷಾ ವರದಿಯೂ ಹೊರಬರಬೇಕಿದೆ. ಪ್ರಕರಣದ ಗಂಭೀರತೆ ಹಾಗೂ ಆರೋಪಿ ತಲೆಮರೆಸಿಕೊಂಡಿರುವುದನ್ನು ಗಮನಿಸಿದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ ಅವರು ಚಿರಾಗ್ ಕೋಠಾರಕರ್ ಅವರ ಜಾಮೀನು ನಿರಾಕರಿಸಿದ್ದಾರೆ.
ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ತನುಜಾ ಹೊಸಪಟ್ಟಣ ಅವರು ವಾದಿಸಿ ಅರ್ಜಿ ತಿರಸ್ಕರಿಸುವಂತೆ ಮನವಿ ಮಾಡಿದ್ದು, ಅದಕ್ಕೆ ನ್ಯಾಯಾಲಯ ಮನ್ನಣೆ ನೀಡಿದೆ. ತನಿಖಾಧಿಕಾರಿ ಕದ್ರಾ ಪೊಲೀಸ್ ನಿರೀಕ್ಷಕ ಪ್ರಭಾಕರ್ ತನಿಖಾ ವರದಿಗಳನ್ನು ಸಲ್ಲಿಸಿದ್ದಾರೆ. ಕಾರವಾರ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಸಇಗದ ಕಾರಣ ಚಿರಾಗ ಹೈಕೋರ್ಟ ಮೊರೆ ಹೋಗುವ ಸಾಧ್ಯತೆಗಳಿವೆ.