• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

March 3, 2026

ಕಾರಿನಲ್ಲಿದ್ದವರ ಮೇಲೆ ಕಲ್ಲು ತೂರಾಟ!

March 3, 2026
Driver who asked for OTP 5 times!

5 ಬಾರಿ OTP ಹೇಳಿದ ಡ್ರೈವರ!

March 3, 2026
ADVERTISEMENT
  • Home
  • Janamata
Tuesday, March 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಡಲ ಉತ್ಸವಕ್ಕೆ ಬೆಳ್ಳಿ ಹಬ್ಬದ ಸಂಭ್ರಮ!

Achyutkumar by Achyutkumar
March 3, 2026
6
VIEWS
Share on FacebookShare on WhatsappShare on Twitter
ADVERTISEMENT

ಕುಮಟಾದ ಬೆಟ್ಕುಳಿಯ ಶ್ರೀ ಓಂ ಶಕ್ತಿ ಯುವಕ ಸಂಘದವರು ನಡೆಸುವ ‘ಕಡಲ ಉತ್ಸವ’ ಮಾರ್ಚ 5 ಹಾಗೂ 6ರಂದು ನಡೆಯಲಿದೆ. 25ನೇ ವರ್ಷದ ಉತ್ಸವದ ಅಂಗವಾಗಿ ಬೆಳ್ಳಿ ಮಹೋತ್ಸವ ಆಚರಣೆಗೆ ಅದ್ಧೂರಿ ಸಿದ್ಧತೆ ನಡೆಯುತ್ತಿದೆ.

ADVERTISEMENT

ಎರಡು ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿದೆ. ಚಲನಚಿತ್ರ ಹಿನ್ನೆಲೆ ಗಾಯಕಿ ಎದೆತುಂಬಿ ಹಾಡುವೆನು ಕಾರ್ಯಕ್ರಮದ ನಾಧೀರಾ ಬಾನು, ಗಾಯಕ ರಾಖೇಶ ದಿಲ್ಸೆ, ಗಾಯಕಿ ಶ್ರೀಜಲ್ ಪೂಜಾರಿ ಸೇರಿದಂತೆ ಸ್ಥಳೀಯ ಕಲಾವಿದರು ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳಲಿದ್ದಾರೆ.

ADVERTISEMENT

ಕುಮಟಾ ತಾಲೂಕಿನ ಬೆಟ್ಕುಳಿಯ ಶ್ರೀ ಓಂ ಶಕ್ತಿ ಮೈದಾನದಲ್ಲಿ ನಡೆಯಲಿರುವ ಈ ಉತ್ಸವವು ಸ್ಥಳೀಯ ಜನತೆಗೆ ಮಾತ್ರವಲ್ಲದೆ ಸಮೀಪದ ಗ್ರಾಮಗಳ ಜನರಿಗೂ ಆಕರ್ಷಣೆಯ ಕೇಂದ್ರವಾಗಲಿದೆ. ಸಮುದ್ರ ತೀರದ ನೈಸರ್ಗಿಕ ಸೌಂದರ್ಯದ ನಡುವೆ ನಡೆಯುವ ಈ ಕಾರ್ಯಕ್ರಮಕ್ಕೆ ಭಾರಿ ಪ್ರಮಾಣದ ಜನಸಮೂಹ ಸೇರುವ ನಿರೀಕ್ಷೆ ಇದೆ.

ADVERTISEMENT

ಉದ್ಘಾಟನಾ ಸಮಾರಂಭ
ಮಾರ್ಚ್ 5ರಂದು ರಾತ್ರಿ ನಡೆಯುವ ಉದ್ಘಾಟನಾ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಉದ್ಘಾಟಿಸಲಿದ್ದು, ಬೆಟ್ಕುಳಿ ಗ್ರಾ.ಪಂ ನಿಕಟ ಪೂರ್ವ ಅಧ್ಯಕ್ಷ ಸಂತೋಷ್ ವಿ ಹರಿಕಾಂತ, ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಮಟಾ ವಿಧಾನಸಭಾ ಶಾಸಕ ದಿನಕರ ಶೆಟ್ಟಿ, ಉತ್ತರ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸೂರಜ್ ನಾಯ್ಕ ಸೋನಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ, ತೊರ್ಕೆ ಗ್ರಾ ಪಂ ನಿಕಟ ಪೂರ್ವ ಅಧ್ಯಕ್ಷ ಆನಂದ ಕವರಿ, ಹರಿಕಾಂತ ಸಮಾಜದ ಅಧ್ಯಕ್ಷ ಲಕ್ಷ್ಮಣ ಹನುಮಂತ ಹರಿಕಾಂತ, ಪತ್ರಕರ್ತರ ಸಂಘದ ಜಿಲ್ಲಾ ಸದಸ್ಯ ಅರುಣ ಶೆಟ್ಟಿ, ಉದ್ಯಮಿ ಶೇಖರ ಹರಿಕಂತ್ರ, ಶಿವರಾಮ ಹರಿಕಾಂತ, ಆನಂದು ಹರಿಕಂತ, ದಾಮೋಧರ ಮೂಡಂಗಿ, ಹಾಗೂ ಸಂಘದ ಅಧ್ಯಕ್ಷ ಮಾರುತಿ ಹರಿಕಾಂತ, ಉಪಾಧ್ಯಕ್ಷ ಕಮಲಾಕರ ವಿ ಹರಿಕಾಂತ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಗೋಪಾಲ ಅಡಿ ಗುರೂಜಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ರಾಜ್ಯದ ಪ್ರಧಾನ ಕಾರ್ಯದರ್ಶಿ ಸುಷ್ಮಾ ರಾಜಗೋಪಾಲ, ಮಾಜಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವಕರ ಉತ್ತರ ಕನ್ನಡ ಜಿಲ್ಲಾ ಮಿನುಗರ ಫೆಡರೇಶನ್ ಸದಸ್ಯ ಮಹೇಶ್ ಮೂಡಂಗಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಜಗದೀಶ್ ನಾಯಕ್ ಮೊಗಟ, ಕರವೇ ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ, ಉದ್ಯಮೆದಾರ ಮಂಜುನಾಥ ನಾಯ್ಕ, ಸುಧಾಕರ ತಾಂಡೇಲ, ಉತ್ತರ ಕನ್ನಡ ಗ್ರಾಮವಕ್ಕಲ ಯುವ ಬಳಗದ ಅಧ್ಯಕ್ಷ ವಿನಾಯಕ ಪಟಗಾರ, ಮುರುಡೇಶ್ವರ ನೇತ್ರಾಣಿ ಅಡ್ವೆಂಚರ್ ಮಾಲಕ ಗಣೇಶ್ ನೇತ್ರಾಣಿ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.

ಶ್ರೀ ಓಂ ಶಕ್ತಿ ಯುವಕ ಸಂಘವು ಕಳೆದ 25 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಈ ವರ್ಷ ಬೆಳ್ಳಿ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದೆ. ಈ ಅಂಗವಾಗಿ ಕಡಲ ಉತ್ಸವವನ್ನು ವಿಶೇಷ ರೀತಿಯಲ್ಲಿ ರೂಪಿಸಲಾಗಿದೆ. ಸಂಘದ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಹಲವು ದಿನಗಳಿಂದ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

ಉತ್ಸವದ ಅಂಗವಾಗಿ ಮೈದಾನದಲ್ಲಿ ವಿಶೇಷ ಅಲಂಕಾರ, ಬೆಳಕು ಅಲಂಕಾರ, ವೇದಿಕೆ ವಿನ್ಯಾಸ ಹಾಗೂ ಸಾರ್ವಜನಿಕರಿಗಾಗಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಭದ್ರತೆ ಹಾಗೂ ವಾಹನ ನಿಲುಗಡೆ ವ್ಯವಸ್ಥೆಯನ್ನೂ ಸಮರ್ಪಕವಾಗಿ ಕಲ್ಪಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

 

ADVERTISEMENT
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋