`ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಎಜೆಂಟರು ಕಾಣಿಸಿದರೆ ಆರ್ ಟಿ ಓ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದು ಅನಿವಾರ್ಯ’ ಎಂದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಎಚ್ಚರಿಸಿದ್ದಾರೆ. ಶುಕ್ರವಾರ ದಾಂಡೇಲಿಗೆ ಆಗಮಿಸಿದ್ದ ಅವರು `ರಾಜ್ಯದ ಪ್ರಾದೇಶಿಕ ಕಚೇರಿಗಳಲ್ಲಿನ ಬಹುತೇಕ ಸಾರ್ವಜನಿಕ ಸೇವೆಗಳನ್ನು ಆನ್ಲ್ಯೆನ್ ವ್ಯವಸ್ಥೆ ಮಾಡಲಾಗಿದೆ. ಅದಾಗಿಯೂ, ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳು ಕಾಣಿಸಿದರೆ ಕಚೇರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವೆ’ ಎಂದರು.
`ಸಾರಿಗೆ ಇಲಾಖೆಯಲ್ಲಿ ಸಮಗ್ರ ಸುಧಾರಣೆ ತರಲಾಗುತ್ತಿದ್ದು, ರಾಜ್ಯದ ಮತ್ತು ಬೇರೆ ರಾಜ್ಯಗಳ ವಾಹನಗಳು ಕಡ್ಡಾಯವಾಗಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಬಂದರೇ ಮಾತ್ರವೇ ವಾಹನಗಳ ಫಿಟ್ನೇಸ್ ಆಗಲು ಜಿಯೋ ಫೆನಸಿಂಗ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಅರ್ಧದಷ್ಟು ವಾಣಿಜ್ಯ ವಾಹನಗಳ ಲೋಕೇಶನ್ ಟ್ಯಾçಕಿಂಗ್ ಮಾಡಲಾಗಿದ್ದು, ಉಳಿದ ವಾಹನಗಳನ್ನು ಮುಂದಿನ ದಿನಗಳಲ್ಲಿ ಪೂರ್ಣಗೊಳಿಸಲಾಗುತ್ತದೆ’ ಎಂದರು. `ರಾಜ್ಯದ 31 ಜಿಲ್ಲೆಗಳಲ್ಲಿ ಆಟೋ ಟೆಸ್ಟಿಂಗ್ ಸ್ಟೇಷನ್ ಮಾಡಲು ಟೆಂಡರ್ ಕರೆಯಲಾಗಿದ್ದು, ಈಗಾಗಲೇ 3 ಟೆಂಡರ್ಗಳಿಗೆ ಈಗಾಗಲೇ ಕಾರ್ಯಾದೇಶ ನೀಡಲಾಗಿದೆ. ಉಳಿದ 2 ಟೆಂಡರ್ಗಳಿಗೆ ಮರು ಟೆಂಡರ್ ಕರೆಯಲಾಗಿದೆ ಇದರಿಂದಾಗಿ ವಾಹನಗಳಿಗೆ ಸಂಬAಧಿಸಿದ ಎಲ್ಲಾ ಕೆಲಸಗಳು ಆಟೋ ಟೆಸ್ಟಿಂಗ್ ಸ್ಟೇಷನ್ನಲ್ಲಿ ಸುಲಭವಾಗಿ ನಡೆಯಲಿವೆ’ ಎಂಬ ವಿಶ್ವಾಸವ್ಯಕ್ತಪಡಿಸಿದರು.
`ಸ್ಲೀಪರ್ ಬಸ್ ದುರಂತಗಳಿಗೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ಹೊಸ ನೀತಿಯನ್ನು ಜಾರಿಗೊಳಿಸಿದ್ದು, ಅದರಂತೆ ಖಾಸಗಿ ಬಸ್ಗಳ ಮಾಲೀಕರಿಗೆ ಈ ತಿಂಗಳದ ಅಂತ್ಯದೊಳಗೆ ಸರ್ಕಾರ ಸೂಚಿಸಿರುವ ನಿಯಮಗಳಿಗೆ ಒಪ್ಪಿಗೆ ಸೂಚಿಸಿದರೆ ಮಾತ್ರ ಸ್ಲೀಪರ್ ಬಸ್ ಗಳನ್ನು ಓಡಿಸಲು ಅನುಮತಿ ನೀಡಲಾಗುತ್ತದೆ’ ಎಂದರು. ಈ ವೇಳೆ ದಾಂಡೇಲಿಯಲ್ಲಿ ನಿರ್ಮಿಸಿದ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥವನ್ನು ರಾಮಲಿಂಗ ರೆಡ್ಡಿ ಅವರು ಉದ್ಘಾಟಿಸಿದರು. `ರಾಜ್ಯದಲ್ಲಿ ಇದುವರೆಗೂ 20 ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಕಾರ್ಯಾರಂಭವಾಗಿದ್ದು, ಇನ್ನೂ 25 ಕಡೆಯಲ್ಲಿ ನಿರ್ಮಾಣ ಕಾರ್ಯವು ಅಂತಿಮ ಹಂತದಲ್ಲಿದೆ. ಶೀಘ್ರದಲ್ಲಿಯೇ ಅದನ್ನು ಪ್ರಾರಂಭವಾಗಲಿದ್ದು, ಇದರಿಂದ ರಾಜ್ಯದ 31 ಜಿಲ್ಲೆಗಳಲ್ಲಿ 45 ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣವಾಗಲಿದೆ. ಈ ಮೂಲಕ ದೇಶದಲ್ಲೇ ಅತೀ ಹೆಚ್ಚು ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ’ ಎಂದರು.
`ದಾAಡೇಲಿಯಲ್ಲಿ ಶೀಘ್ರದಲ್ಲೇ ನೂತನ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿ ಪ್ರಾರಂಭಿಸಲಾಗುವುದು ಹಾಗೂ ದಾಂಡೇಲಿ-ಬೆAಗಳೂರು ಪಲ್ಲಕ್ಕಿ ಬಸ್ ನೀಡಲು ಸಂಸ್ಥೆಯ ಎಂ ಡಿ ಅವರಿಗೆ ಸೂಚನೆ ನೀಡಲಾಗಿದೆ’ ಎಂದರು. `ದಾಂಡೇಲಿಯಲ್ಲಿ ದೇಶಪಾಂಡೆ ಅವರ ಪ್ರಯತ್ನದಿಂದಾಗಿ ಉತ್ತಮವಾದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಜೊತೆಗೆ ಸ್ವಯಂ ಚಾಲಿತ ಚಾಲನ ಪರೀಕ್ಷಾ ಪಥವನ್ನು ನಿರ್ಮಿಸಲಾಗಿದೆ. ಇದರಿಂದಾಗಿ ಈ ಭಾಗದ ಜನರಿಗೆ ತುಂಬಾ ಅನುಕೂಲವಾಗಿದ್ದು, ಉತ್ತಮ ಗುಣಮಟ್ಟದ ಪಥ ನಿರ್ಮಾಣವಾಗಿದ್ದು, ಈ ಪಥವು ಸ್ವಯಂ ಚಾಲಿತವಾಗಿರುವುದರಿಂದ ಎಲ್ಲವೂ ಸೆನ್ಸರ್ ಮೂಲಕ ನಡೆಯಲಿದ್ದು, ಯಾವುದೇ ರೀತಿಯ ಮಾನವ ಹಸ್ತಕ್ಷೇಪ ಇರುವುದಿಲ್ಲ’ ಎಂದರು. ಶಾಸಕ ಆರ್ ವಿ ದೇಶಪಾಂಡೆ ಮಾತನಾಡಿ `ದೇಶ ವಿದೇಶದಿಂದ ಪ್ರವಾಸಿಗರು ದಾಂಡೇಲಿಗೆ ಆಗಮಿಸುತ್ತಿದ್ದಾರೆ. ಆ ನಿಟ್ಟಿನಲ್ಲಿ ದಾಂಡೇಲಿ ನಗರವನ್ನು ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದು. ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಠಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾಂಡೇಲಿಯಲ್ಲಿ ಸುಸಜ್ಜಿತ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ಈ ಭಾಗದ ಜನರ ಕನಸಾಗಿದೆ. ದಾಂಡೇಲಿಯಿAದ ಬೆಂಗಳೂರಿಗೆ ಸುಸಜ್ಜಿತ ಬಸ್ ಸಂಚಾರ ಆರಂಭವಾಗಬೇಕು’ ಎಂದರು.
ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಅಪರ ಸಾರಿಗೆ ಆಯುಕ್ತ ಹಾಲಸ್ವಾಮಿ, ಬೆಳಗಾವಿ ವಿಭಾಗದ ಜಂಟಿ ಆಯುಕ್ತ ಸಿದ್ದಪ್ಪ ಕಲ್ಲೇರ, ದಾಂಡೇಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತ ವಿವೇಕ್ ಬನ್ನೇ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಟಿ ಸಿ ಹಾದಿಮನಿ, ಡಿವೈಎಸ್ಪಿ ಶಿವಾನಂದ ಮದರಕಂಡಿ, ದಾಂಡೇಲಿಯ ಎ.ಆರ್.ಟಿ.ಓ. ಅವಿನಾಶ್ ಕಾವೇರಿ ಮತ್ತಿತರರು ಉಪಸ್ಥಿತರಿದ್ದರು.