• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta We are the children of fishermen... We will fight unitedly!

ಕುಮಟಾ | ಮೀನುಗಾರರ ಮಕ್ಕಳು ನಾವು.. ಒಗ್ಗಟ್ಟಿನಿಂದ ಹೋರಾಡುವೆವು!

August 10, 2026
Karwar Illicit liquor in a chicken coop!

ಕಾರವಾರ | ಕೋಳಿ ಮನೆಯಲ್ಲಿ ಕಳ್ಳ ಸರಾಯಿ!

August 10, 2026
Karwar Protest against the government Red flag flies high even in custody!

ಕಾರವಾರ | ಸರ್ಕಾರದ ವಿರುದ್ಧ ಹೋರಾಟ: ಬಂಧನದಲ್ಲಿಯೂ ಹಾರಾಡಿದ ಕೆಂಪು ಬಾವುಟ!

August 10, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta We are the children of fishermen... We will fight unitedly!

ಕುಮಟಾ | ಮೀನುಗಾರರ ಮಕ್ಕಳು ನಾವು.. ಒಗ್ಗಟ್ಟಿನಿಂದ ಹೋರಾಡುವೆವು!

August 10, 2026
Karwar Illicit liquor in a chicken coop!

ಕಾರವಾರ | ಕೋಳಿ ಮನೆಯಲ್ಲಿ ಕಳ್ಳ ಸರಾಯಿ!

August 10, 2026
Karwar Protest against the government Red flag flies high even in custody!

ಕಾರವಾರ | ಸರ್ಕಾರದ ವಿರುದ್ಧ ಹೋರಾಟ: ಬಂಧನದಲ್ಲಿಯೂ ಹಾರಾಡಿದ ಕೆಂಪು ಬಾವುಟ!

August 10, 2026
  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕಡತ ಕಾಣೆಯಾಗಿದ್ದರೆ ಪೊಲೀಸ್ ಪ್ರಕರಣ ಕಡ್ಡಾಯ!

Achyutkumar by Achyutkumar
April 4, 2026
If the file is missing a police report is mandatory
Share on FacebookShare on WhatsappShare on Twitter

`ಸರ್ಕಾರಿ ಕಚೇರಿಯಲ್ಲಿನ ಕಡತ ಕಾಣೆಯಾದರೆ ಕೂಡಲೇ ಪೊಲೀಸ್ ಪ್ರಕರಣ ದಾಖಲಿಸಬೇಕು’ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಹರೀಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ. ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಅವರು ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ ನಡೆಸಿದ್ದು, ಕಾಯ್ದೆ ಅನುಷ್ಠಾನದ ಬಗ್ಗೆ ಅಧಿಕಾರಿಗಳಲ್ಲಿ ಅರಿವು ಮೂಡಿಸಿದ್ದಾರೆ.

ADVERTISEMENT

`ಮಾಹಿತಿ ಹಕ್ಕು ಕಾಯಿದೆ 2005ರಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ’ ಎಂದವರು ಹೇಳಿದ್ದಾರೆ. ಮಾಹಿತಿ ಹಕ್ಕು ಕಾಯಿದೆಯು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಕಾನೂನಾತ್ಮಕವಾಗಿ ಸಾರ್ವಜನಿಕ ಕೆಲಸಗಳನ್ನು ಮಾಡಲು ಸಹಕಾರಿಯಾಗಿದ್ದು, ಇದು ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಣೆ ಮಾಡುವ ಕಾಯಿದೆಯಾಗಿ ಬದಲಾಗಿದೆ. ಈ ಕಾಯಿದೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ತಪ್ಪುಗಳನ್ನು ಮಾಡದಂತೆ ಕೆಲಸ ನಿರ್ವಹಿಸಲು ಸಹಕಾರಿಯಾಗಿದೆ’ ಎಂದವರು ಹೇಳಿದ್ದಾರೆ. `ಕಾಯಿದೆಯ ಕುರಿತು ಆಗಾಗ ಸರ್ವೋಚ್ಛ ನ್ಯಾಯಾಲಯ, ರಾಜ್ಯ ಹೈಕೋರ್ಟ್ಗಳು ನೀಡುವ ತೀರ್ಪುಗಳ ಕುರಿತು ಮಾಹಿತಿ ಅಧಿಕಾರಿಗಳು ಅರಿವುಹೊಂದಿರಬೇಕು. ಕಾಯಿದೆಯಲ್ಲಿನ ಎಲ್ಲಾ ಅಂಶಗಳ ಬಗ್ಗೆ ಸಮಗ್ರವಾಗಿ ಅರಿತುಕೊಂಡು ಸಾರ್ವಜನಿಕರಿಗೆ ಮಾಹಿತಿಗಳನ್ನು ಒದಗಿಸಬೇಕು. ಪ್ರಥಮ ಮೇಲ್ಮನವಿ ಮತ್ತು ಎರಡನೇ ಮೆಲ್ಮನವಿಗಳ ಸಲ್ಲಿಕೆಗೆ ಅವಕಾಶ ನೀಡದೇ ಅರ್ಜಿಗಳನ್ನು ಮೊದಲ ಹಂತದಲ್ಲಿಯೇ ವಿಲೇಗೊಳಿಸಬೇಕು. ನಿಗಧಿತ ಅವಧಿಯೊಳಗೆ ಮಾಹಿತಿ ಒದಗಿಸದ ಅಧಿಕಾರಿಗಳಿಗೆ 25 ಸಾವಿರ ರೂ ದಂಡ ಹಾಗೂ ಕರ್ತವ್ಯ ಲೋಪದ ಶಿಸ್ತು ದಂಡ ವಿಧಿಸುವಂತೆ ಸಂಬoಧಪಟ್ಟ ಪ್ರಾಧಿಕಾರಕ್ಕೆ ಸೂಚಿಸುವ ಅಧಿಕಾರ ಆಯೋಗಕ್ಕಿದೆ’ ಎಂದವರು ವಿವರಿಸಿದರು.

ADVERTISEMENT

`ಸಾರ್ವಜನಿಕರಿಗೆ ಶೀಘ್ರದಲ್ಲಿ ಮತ್ತು ಸಮರ್ಪಕವಾದ ಮಾಹಿತಿ ನೀಡಲು ಅನುಕೂಲವಾಗುವಂತೆ ಕಚೇರಿಗಳಲ್ಲಿ ಕಡತಗಳನ್ನು ವರ್ಗಿಕರಣ ಮಾಡಿಟ್ಟುಕೊಳ್ಳಬೇಕು. ಕಡತಗಳನ್ನು ನಿಯಮಾನುಸಾರ ನಾಶಪಡಿಸಿದ್ದರೆ ಈ ಬಗ್ಗೆ ದಾಖಲೆ ಇರಬೇಕು. ಕಡತಗಳು ಕಣ್ಮರೆಯಾಗಿದ್ದಲ್ಲಿ FIR ದಾಖಲಿಸಬೇಕು. ಇಲ್ಲವಾದಲ್ಲಿ ಸಂಬAಧÀಪಟ್ಟ ಅಧಿಕಾರಿಯ ವಿರುದ್ಧವೇ ಶಿಕ್ಷೆ ವಿಧಿಸಬಹುದಾಗಿದೆ’ ಎಂದವರು ತಿಳಿಸಿದರು. ಮಾಹಿತಿ ಹಕ್ಕು ಕಾಯಿದೆಯ ವಿವಿಧ ಸೆಕ್ಷನ್‌ಗಳಡಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಾದ ಕಾರ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದ ಅವರು `ಕಾಯಿದೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು. ಎಲ್ಲಾ ಕಚೇರಿಗಳಲ್ಲಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಮತ್ತು ಮೇಲ್ಮನವಿ ಅಧಿಕಾರಿಗಳ ವಿವರಗಳನ್ನು ಹಾಗೂ ಸೆಕ್ಷನ್ 4 (1)ಎ ಮತ್ತು 4 (1)ಬಿ ಮಾಹಿತಿಯನ್ನು ಅಳಡಿಸುವಂತೆ ಕಡ್ಡಾಯವಾಗಿ ಅಳವಡಿಸುವಂತೆ ಸೂಚಿಸಿದರು. ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಮಾತನಾಡಿ `ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿದಾರರು ಕೋರುವ ಮಾಹಿತಿಯನ್ನು ವಿವರವಾಗಿ ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ನಿಗಧಿತ ಶುಲ್ಕಪಡೆದು ನೀಡಬೇಕು. ಈ ಕಾಯಿದೆಯ ದುರ್ಬಳಕೆ ಕುರಿತು ಕೂಡಾ ಆಯೋಗಕ್ಕೆ ದೂರುಗಳು ಬಂದಿದ್ದು, ಆಯೋಗವು ಇದುವರೆಗೆ 26 ಜನರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಆಯೋಗದಲ್ಲಿ 55,400 ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದು, ಅವುಗಳಲ್ಲಿ 26,670 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಪ್ರಸ್ತುತ 28,730 ಬಾಕಿ ಇವೆ. ಉತ್ತರ ಕನ್ನಡ ಜಿಲ್ಲೆಗೆ ಸಂಬAದಿಸಿದoತೆ 524 ಅರ್ಜಿಗಳು ಬಾಕಿ ಇದ್ದು ಜಿಲ್ಲೆಯು ರಾಜ್ಯದಲ್ಲಿ 17 ನೇ ಸ್ಥಾನದಲ್ಲಿದ್ದು, ಜಿಲ್ಲೆಯ ಅರ್ಜಿಗಳಲ್ಲಿ 164 ಅರ್ಜಿಗಳು ಆರ್.ಡಿ.ಪಿ.ಆರ್ ಮತ್ತು 110 ಅರ್ಜಿಗಳು ಕಂದಾಯ ಇಲಾಖೆಗೆ ಸೇರಿದ್ದು, ಉಳಿದದ್ದು ಇತರೆ ಇಲಾಖೆಗಳದ್ದಾಗಿದೆ’ ಎಂದರು. `ಮೇಲ್ಮನವಿ ಅರ್ಜಿಗಳನ್ನು ಪ್ರಥಮ ಮೇಲ್ಮನವಿ ಅಧಿಕಾರಿಗಳ ಹಂತದಲ್ಲೇ ವಿಲೇ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಹಂತದಲ್ಲಿ ಪರಿಶೀಲನಾ ಸಭೆಯನ್ನು ನಡೆಸುವಂತೆ ಮತ್ತು ತ್ರೆöÊಮಾಸಿಕ ಕಡಿಪಿ ಸಭೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿಯನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಪ್ರಗತಿ ಪರಿಶೀಲನೆ ನಡೆಸಬೇಕು’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮಾತನಾಡಿ `ಜಿಲ್ಲೆಯಲ್ಲಿ ಕಂದಾಯ, ಅರಣ್ಯ, ಪೊಲೀಸ್, ಗ್ರಾಮೀಣಭಿವೃದ್ಧಿ ಇಲಾಖೆಗಳಿಗೆ ಸಂಬoಧಿಸಿದAತೆ ಹೆಚ್ಚಿನ ಸಂಖ್ಯೆಯಲ್ಲಿ ಮಾಹಿತಿ ಹಕ್ಕು ಕಾಯಿದೆ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಕಾಯಿದೆಯು ಸಾರ್ವಜನಿಕರಿಗೆ ಆಡಳಿತ ವ್ಯವಸ್ಥೆ ಮೇಲೆ ನಂಬಿಕೆ ಮೂಡಿಸುವ ಮತ್ತು ಪ್ರಜಾಪ್ರಭುತ್ವದ ಬಲಪಡಿಸಲು ಸಹಾಯವಾಗಲಿದೆ. ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ ನಡೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಅತ್ಯಂತ ಶೀಘ್ರದಲ್ಲಿ ಮಾಹಿತಿ ಒದಗಿಸಲು ಸಾಧ್ಯವಾಗಲಿದ್ದು, ಪಾರದರ್ಶಕತೆ ತರಲು ಸಾಧ್ಯವಾಗಲಿದೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಾಯಿದೆಯ ಕುರಿತಂತೆ ಸಂಪೂರ್ಣ ಅರಿವು ಹೊಂದಿರಬೇಕು’ ಎಂದರು. ಮಾಹಿತಿ ಆಯುಕ್ತ ನಾರಾಯಣ ಚನ್ನಾಳ, ಜಿ ಪಂ. ಸಿಇಓ ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಇದ್ದರು. ನಂತರ ಸಾರ್ವಜನಿಕರು ಹಾಗೂ ಮಾಧ್ಯಮದವರೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಸಂವಾದ ಚರ್ಚೆ ನಡೆಯಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta We are the children of fishermen... We will fight unitedly!

ಕುಮಟಾ | ಮೀನುಗಾರರ ಮಕ್ಕಳು ನಾವು.. ಒಗ್ಗಟ್ಟಿನಿಂದ ಹೋರಾಡುವೆವು!

August 10, 2026
Karwar Illicit liquor in a chicken coop!

ಕಾರವಾರ | ಕೋಳಿ ಮನೆಯಲ್ಲಿ ಕಳ್ಳ ಸರಾಯಿ!

August 10, 2026
Karwar Protest against the government Red flag flies high even in custody!

ಕಾರವಾರ | ಸರ್ಕಾರದ ವಿರುದ್ಧ ಹೋರಾಟ: ಬಂಧನದಲ್ಲಿಯೂ ಹಾರಾಡಿದ ಕೆಂಪು ಬಾವುಟ!

August 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!