ಅಕ್ರಮ ಸಂಬoಧ ಉಳಿಸಿಕೊಳ್ಳುವುದಕ್ಕಾಗಿ ಪ್ರೇಯಸಿಯ ಪತಿಯನ್ನ ಕೊಲೆ ಮಾಡುವ ಹಂತಕ್ಕೆ ಹೋಗಿದ್ದ ಸಿದ್ದಾಪುರದ ಜ್ಯೋತಿಷಿ ಕಮಲಾಕರ ಭಟ್ಟ ಜೈಲು ಸೇರಿ ತಿಂಗಳು ಕಳೆದಿದೆ. ಈ ನಡುವೆ ಕಮಲಾಕರ ಭಟ್ಟ ವಿರುದ್ಧ ಅಪ್ರಾಪ್ತೆಯ ವಿರುದ್ಧ ಅತ್ಯಾಚಾರ ಪ್ರಕರಣವೂ ದಾಖಲಾಗಿದ್ದು, ಈ ಪ್ರಕರಣ ಕಮಲಾಕರ ಭಟ್ಟರ ಪಾಲಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. .
ಸಿದ್ದಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣದ ಜ್ಯೋತಿಷಿ ಕಮಲಾಕರ್ ಭಟ್ ಜೈಲು ಸೇರಿದ್ದಾರೆ. ಶಿವಮೊಗ್ಗದಲ್ಲಿಯೂ ಕಮಲಾಕರ ಭಟ್ಟ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ವಿಷಯವಾಗಿ ಅಲ್ಲಿನ ಪೊಲೀಸರು ಕಮಲಾಕರ ಭಟ್ಟರನ್ನು ವಶಕ್ಕೆಪಡೆದಿದ್ದಾರೆ. ಅಪ್ರಾಪ್ತೆಯ ಹೇಳಿಕೆಯನ್ನು ಪಡೆದಿರುವ ಪೊಲೀಸರು ಅದೇ ವಿಷಯವಾಗಿ ಕಮಲಾಕರ ಭಟ್ಟರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದರೂ, ತನಿಖಾ ಹಿತದೃಷ್ಟಿಯಿಂದ ಅದನ್ನು ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯ ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಕಾರವಾರ ಜೈಲಿನಲ್ಲಿದ್ದ ಕಮಲಾಕರ್ ಭಟ್ ಅವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಲಾಗಿದೆ. ಪೊಲೀಸರು ಶಿವಮೊಗ್ಗದ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದ್ದು, ವಿಚಾರಣೆಗಾಗಿ ನ್ಯಾಯಾಲಯ ಅನುಮತಿ ನೀಡಿದೆ.
ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿಯೂ ಆರೋಪಿಯಾಗಿರುವ ಕಮಲಾಕರ್ ಭಟ್ ವಿರುದ್ಧ ವಿವಿಧ ಪ್ರಕರಣಗಳು ದಾಖಲಾಗಿದ್ದು, ಈಗ ಪೋಕ್ಸೋ ಪ್ರಕರಣದ ತನಿಖೆ ಮತ್ತಷ್ಟು ಗಂಭೀರಗೊAಡಿದೆ. ಸದ್ಯ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುವ ಪೊಲೀಸರು ಆರೋಪಿ ಕಮಲಾಕರ ಭಟ್ನಿಂದ ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಎಲ್ಲದರ ನಡುವೆ ಕಮಲಾಕರ ಭಟ್ಟ ಅವರು ಔಷಧಿ ಇಲ್ಲದ ರೋಗದಿಂದ ಬಳಲುತ್ತಿರುವ ಬಗ್ಗೆಯೂ ಮಾಹಿತಿ ಲಭಿಸಿದೆ.