`ಮೇ 18ರಿಂದ 23ರವರೆಗೆ ನಡೆಯುವ SSLC ಪರೀಕ್ಷೆ – 2 ನಡೆಯಲಿದ್ದು, ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು’ ಎಂದು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಭಾವಿ ಸಭೆ ನಡೆಸಿದ ಅವರು `ಅತ್ಯಂತ ಶಿಸ್ತಿನಿಂದ ಪರೀಕ್ಷೆ ನಡೆಸಬೇಕು’ ಎಂದು ಹೇಳಿದ್ದಾರೆ.
` ಎಸ್ ಎಸ್ ಎಲ್ ಸಿ ಪರೀಕ್ಷೆ-ಗೆ ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಒಟ್ಟು 1,773 ವಿದ್ಯಾರ್ಥಿಗಳು ಹಾಜರಾಗಲಿದ್ದು, ಇದಕ್ಕಾಗಿ 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸವೇಕು. ಪರೀಕ್ಷಾ ಪಾವಿತ್ರö್ಯತೆಯನ್ನು ಕಾಪಾಡಬೇಕು’ ಎಂದು ಸೂಚಿಸಿದ್ದಾರೆ.
`ಪರೀಕ್ಷಾ ಕೇಂದ್ರಗಳಿಗೆ ವಿಕ್ಷಣಾಧಿಕಾರಿಗಳನ್ನು ನೇಮಕ ಮಾಡಬೇಕು, ವೆಬ್ ಕಾಸ್ಟಿಂಗ್ ವ್ಯವಸ್ಥೆ ಸಮರ್ಪಕವಾಗಿರಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಬಸ್ಗಳ ಕೊರತೆಯಾಗದ ಹಾಗೇ ನೋಡಿಕೊಳ್ಳಬೇಕು. ವಿದ್ಯುತ್ ಸಮಸ್ಯೆಗೂ ಅವಕಾಶ ಕೊಡಬಾರದು’ ಎಂದರು. `ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆಗಳು ದೋಷರಹಿತವಾಗಿ ನಡೆಯುವಂತೆ ತಮಗೆ ವಹಿಸಲಾಗಿರುವ ಕರ್ತವ್ಯ ನಿರ್ವಹಿಸಬೇಕು’ ಎಂದರು.
ಈ ಸಭೆಯಲ್ಲಿ ಶಿಕ್ಷಣಾಧಿಕಾರಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯ ನೋಡೆಲ್ ಅಧಿಕಾರಿಶುಭಾ ನಾಗೇಂದ್ರ ನಾಯಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಮತ್ತು ವರ್ಚುವಲ್ ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರ್ಗಳು ಮತ್ತು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಹಾಜರಿದ್ದರು.