`ದೈಹಿಕ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ಬೆಂಗಳೂರಿನ ನಾರಾಯಣ ಹೆಲ್ತ್ ಸಂಸ್ಥೆಯ ಸಿಎಸ್ಆರ್ ವಿಭಾಗದ ಡೆಪ್ಯೂಟಿ ಮ್ಯಾನೇಜರ್ ಮುತ್ತರಾಜ್ ಹೇಳಿದ್ದಾರೆ. ಶಿರಸಿಯ ಸಾಲ್ಕಣಿ ಗಣೇಶನಗರದ ಶ್ರೀ ಲಕ್ಷಿನರಸಿಂಹ ಪ್ರೌಢಶಾಲೆ ಹಾಗೂ ಭೂಮಾ ಪ್ರೌಢಶಾಲೆಗಳಲ್ಲಿ ನೂತನವಾಗಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿದ ಅವರು `ವಿದ್ಯಾರ್ಥಿಗಳಲ್ಲಿ ನೀರಿನಿಂದ ಹರಡುವ ಕಾಯಿಲೆಗಳನ್ನು ತಡೆಯುವ ಉದ್ದೇಶದಿಂದ ನಾರಾಯಣ ಹೆಲ್ತ್ ಹಾಗೂ ಸ್ಕೊಡ್ವೆಸ್ ಸಂಸ್ಥೆಯ ಸಹಯೋಗದಲ್ಲಿ ಶುದ್ಧ ನೀರಿನ ಘಟಕ ಸ್ಥಾಪಿಸಲಾಗಿದೆ. ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ ಕಾಪಾಡುವುದೇ ನಮ್ಮ ಉದ್ದೇಶ’ ಎಂದರು.
`ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸ್ಥಾಪಿಸಲಾದ ಶುದ್ಧ ನೀರಿನ ಘಟಕಗಳು ಅತ್ಯಂತ ಉತ್ಕೃಷ್ಟವಾಗಿದ್ದು, ಅವುಗಳನ್ನು ಸರಿಯಾಗಿ ನಿರ್ವಹಿಸುವ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರತಿನಿತ್ಯ ಅವಶ್ಯವಿರುವ ಶುದ್ಧ ನೀರು ಪಡೆಯಬೇಕು’ ಎಂದು ಕರೆ ನೀಡಿದರು. ಸ್ಕೊಡ್ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಮಾತನಾಡಿ `ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಮಳೆಯಾಗುತ್ತಿದ್ದರೂ ಹಲವಾರು ಭಾಗಗಳಲ್ಲಿ ಬೇಸಿಗೆಯಲ್ಲಿ ನೀರಿನ ಅಭಾವ ಎದುರಿಸಬೇಕಾದ ಸಂದರ್ಭವಿದೆ. ಹಲವಾರು ಶಾಲೆಗಳಲ್ಲೂ ನೀರಿನ ಅಭಾವದಿಂದ ಮಧ್ಯಾಹ್ನದ ಬಿಸಿಯೂಟಕ್ಕೂ ತೊಂದರೆ ಎದುರಿಸುವ ಸಂದರ್ಭವಿದೆ. ಶುದ್ಧ ನೀರಿನ ಕೊರತೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ವಿದ್ಯಾರ್ಥಿಗಳು ಗೈರು ಹಾಜರಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಶುದ್ಧ ನೀರಿನ ಘಟಕಗಳನ್ನು ಅಳವಡಿಸಲಾಗುತ್ತಿದೆ’ ಎಂದರು.
ಈ ಸಂದರ್ಭದಲ್ಲಿ ಶಿವಮೊಗ್ಗ ನಾರಾಯಣ ಹೆಲ್ತ್ನ ಸೀನಿಯರ್ ಎಕ್ಸಿಕ್ಯೂಟಿವ್ ಆಕಾಶ್ ಕೆ ಸಿ, ಸ್ಕೊಡ್ವೆಸ್ನ ಕಾರ್ಯಕ್ರಮಾಧಿಕಾರಿ ನಾರಾಯಣ ಹೆಗಡೆ, ಯೋಜನಾ ವಿಭಾಗದ ಮುಖ್ಯಸ್ಥ ವೀರೇಂದ್ರ ಸಿ, ಸಾಲ್ಕಣಿ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಭಟ್, ಗಣೇಶ ನಗರ ಶಾಲೆಯ ಮುಖ್ಯೋಪಾಧ್ಯಾಯ ತೇಲು ಬೋರ್ಕರ್, ಶಾಲಾ ಶಿಕ್ಷಕ ಮೋಹನ್ ನಾಯ್ಕ,